ಚಿಕ್ಕಮಗಳೂರು: ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ

Update: 2021-01-16 07:58 GMT

ಚಿಕ್ಕಮಗಳೂರು, ಜ.16: ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಅಭಿಯಾನ ಕಾರ್ಯಕ್ರಮವನ್ನು ಜಿಪಂ ಉಪಾಧ್ಯಕ್ಷ  ಸೋಮಶೇಖರ್ ಉದ್ಘಾಟಿಸಿದರು.

  ಕೊರೋನ ಯೋಧೆ ಗುರಮ್ಮಗೆ ಮೊದಲ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಜಿಲ್ಲಾಸ್ಪತ್ರೆ ಸೇರಿದಂತೆ ಒಂಭತ್ತು ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ಆರಂಭಗೊಂಡಿದ್ದು, ಇಂದು ಪ್ರತಿ ಕೇಂದ್ರದಲ್ಲಿ ತಲಾ ನೂರು ಮಂದಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಕಳೆದ ಒಂದು ಗಂಟೆಯ ಅವಧಿಯಲ್ಲಿ 15 ಮಂದಿಗೆ ಕೋವ್ಯಾಕ್ಸಿನ್ ಡೋಸ್ ನೀಡಲಾಯಿತು.

 ಜಿಲ್ಲಾ ಆರೋಗ್ಯಾಧಿಕಾರಿ ಡಾ.ಉಮೇಶ್, ಸರ್ಜನ್ ಮೋಹನ್ ಕುಮಾರ್, ಎಸಿ ನಾಗರಾಜ್  ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News