ಮಂಗಳೂರು - ತಿರುವನಂತಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅನಾಹುತ

Update: 2021-01-17 05:12 GMT

ಕಾಸರಗೋಡು : ಮಂಗಳೂರು - ತಿರುವನಂತಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅನಾಹುತ ಉಂಟಾಗಿದ್ದು, ಯಾರಿಗೂ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಇಂದು ಬೆಳಗ್ಗೆ 7.45 ರ ಸುಮಾರಿಗೆ ಈ ಘಟನೆ ನಡೆದಿದೆ.

ಪಾರ್ಸೆಲ್ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಿರುವನಂತಪುರದ ವರ್ಕಳದಲ್ಲಿ ಘಟನೆ ನಡೆದಿದ್ದು, ಹೊಗೆ ಗಮನಿಸಿದ ಪ್ರಯಾಣಿಕರು ಚೈನ್ ಎಳೆದು  ರೈಲನ್ನು ನಿಲ್ಲಿಸಿ ಭಾರೀ ಅಪಾಯವನ್ನು ತಪ್ಪಿಸಿದ್ದಾರೆ.

ಬಳಿಕ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು . ಬೆಂಕಿ ಹತ್ತಿಕೊಂಡ ಭಾಗವನ್ನು ಬೇರ್ಪಡಿಸಲು ಸಾಧ್ಯವಾದುದರಿಂದ ಇತರ ಕಡೆಗಳಿಗೆ ಬೆಂಕಿ ಹರಡದಂತೆ ತಡೆಗಟ್ಟಲಾಯಿತು. ಸ್ಥಳೀಯರು, ಪ್ರಯಾಣಿಕರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News