ಆಹ್ವಾನವಿಲ್ಲದೆ ಯಾವುದೇ ಕಾರ್ಯಕ್ರಮಕ್ಕೆ ಹೋಗುವುದಿಲ್ಲ: ಬಸನಗೌಡ ಪಾಟೀಲ್ ಯತ್ನಾಳ್
Update: 2021-01-17 13:08 GMT
ಹಾವೇರಿ, ಜ.17: ಕೇಂದ್ರ ಗೃಹ ಸಚಿವ ಸಮಿತ್ ಶಾ ಅವರು ಎರಡು ದಿನಗಳ ರಾಜ್ಯದ ಪ್ರವಾಸದಲ್ಲಿದ್ದಾರೆ. ನಾನು ಆಹ್ವಾನವಿಲ್ಲದೇ ಯಾವುದೇ ಕಾರ್ಯಕ್ರಮಕ್ಕೆ ಹೋಗುವ ವ್ಯಕ್ತಿಯಲ್ಲ ಎಂದು ಕೇಂದ್ರ ಮಾಜಿ ಸಚಿವ, ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ರವಿವಾರ ರಾಣೆಬೆನ್ನೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅಭಿವೃದ್ಧಿ ಪರ ಹೇಳಿಕೆ ನೀಡಿದ್ದೇನೆ. ಸಿಎಂ ಯಡಿಯೂರಪ್ಪ ಅವರ ಹತ್ತಿರ ಅಭಿವೃದ್ಧಿ ಕಾರ್ಯಗಳಿಗಾಗಿ ಅನುದಾನ ಕೊಡಿ ಎಂದು ಕೇಳಿದ್ದೇನೆ ಅಷ್ಟೇ. ಅದನ್ನು ಸಹ ಕೇಳಬಾರದಾ ಎಂದು ಪ್ರಶ್ನಿಸಿದರು.
ಪಕ್ಷದ ವಿರುದ್ಧ ಮಾತನಾಡಿದವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿದೆ. ಪಕ್ಷದ ವಿರುದ್ಧ ಯಾರು ಹೇಳಿಕೆ ಕೊಟ್ಟಿದ್ದಾರೆ ಅದನ್ನು ಮೊದಲು ಬಹಿರಂಗ ಪಡಿಸಬೇಕಾಗಿದೆ. ಎಲ್ಲಾದರೂ ಹೋಗಬೇಕಾದರೆ ಅದಕ್ಕೊಂದು ವ್ಯವಸ್ಥೆ ಇರುತ್ತದೆ. ಹಲವರ ತರ ನಾನು ಸುಖಾ ಸುಮ್ಮನೆ ಖುಷಿಪಡಿಸುವ ರಾಜಕಾರಣಿ ಅಲ್ಲ ಎಂದು ಹೇಳಿದರು.