ಪಶ್ಚಿಮಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧೆ: ಸಂಜಯ ರಾವತ್

Update: 2021-01-17 14:53 GMT

ಮುಂಬೈ: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಪಕ್ಷದ ಹಿರಿಯ ನಾಯಕ ಸಂಜಯ್ ರಾವತ್ ರವಿವಾರ ದೃಢಪಡಿಸಿದ್ದಾರೆ.

 ‘ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಜೊತೆ ಚರ್ಚಿಸಿದ ಬಳಿಕ ಪಶ್ಚಿಮಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಶಿವಸೇನೆ ನಿರ್ಧರಿಸಿದೆ. ನಾವು ಶೀಘ್ರದಲ್ಲೇ ಕೋಲ್ಕತಾವನ್ನು ತಲುಪಲಿದ್ದೇವೆ’ ಎಂದು ಸಂಸದ ಹಾಗೂ ಪಕ್ಷದ ವಕ್ತಾರ ರಾವತ್  ರವಿವಾರ ಸಂಜೆ ಟ್ವೀಟಿಸಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ ಪ.ಬಂಗಾಳ ವಿಧಾನಸಭಾ ಚುನಾವಣೆಯು 2021ರ ಮಾರ್ಚ್ ಹಾಗೂ ಎಪ್ರಿಲ್ ನಲ್ಲಿ ನಿಗದಿಯಾಗಿದೆ. ಮಹಾರಾಷ್ಟ್ರದಲ್ಲಿ ಶಿವಸೇನಾದೊಂದಿಗೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್ ಪಕ್ಷ ಪ.ಬಂಗಾಳದಲ್ಲಿ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದೆ. 2014ರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಹಲವು ರಾಜ್ಯಗಳಲ್ಲಿ ಸರಕಾರ ರಚಿಸಿದ್ದು, ಪ.ಬಂಗಾಳದಲ್ಲೂ ಸರಕಾರ ರಚಿಸಲು ಭಾರೀ ತಯಾರಿ ನಡೆಸುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News