ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಮಂಗಳೂರು ಭೇಟಿ

Update: 2021-01-17 16:04 GMT

ಮಂಗಳೂರು, ಜ.17: ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ರಾಜ್ಯ ಅಲ್ಪಸಂಖ್ಯಾತರ ಅಯೋಗದ ಅಧ್ಯಕ್ಷ ಅಬ್ದುಲ್ ಅಝೀಮ್ ರವಿವಾರ ಮಂಗಳೂರಿಗೆ ಭೇಟಿ ನೀಡಿದ್ದಾರೆ.

ನಗರ ಸರ್ಕ್ಯೂಟ್ ಹೌಸ್‌ನಲ್ಲಿ ತಂಗಿರುವ ಅವರು ಸೋಮವಾರ ಅಧಿಕೃತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭ ದ.ಕ.ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ ಮುಖಂಡರು, ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿ ದ್ದಾರೆ. ಅಲ್ಲದೆ ಧಾರ್ಮಿಕ ಕೇಂದ್ರಗಳಿಗೆ ಸೌಹಾರ್ದ ಭೇಟಿ ನೀಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ನಿರ್ದೇಶಕ ಮೆಹಬೂಬ್ ಸಾಬ್ ಅವರು ರವಿವಾರ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದರು. ದರ್ಗಾದ ಅಧ್ಯಕ್ಷ ಅಬ್ದುಲ್ ರಶೀದ್ ಉಳ್ಳಾಲ ಅವರು ನಿರ್ದೇಶಕರನ್ನು ಬರ ಮಾಡಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News