ಕೆರೆಗಳ ಜಿಲ್ಲಾವಾರು ವಿವರಗಳನ್ನು ನೀಡಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

Update: 2021-01-17 18:15 GMT

ಬೆಂಗಳೂರು, ಜ. 17: ರಾಜ್ಯದಲ್ಲಿರುವ ಒಟ್ಟು ಕೆರೆಗಳ ಜಿಲ್ಲಾವಾರು ವಿವರಗಳನ್ನು ನೀಡುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.
ಕೆರೆಗಳ ಸಂರಕ್ಷಣೆ ಮತ್ತು ಪುನರುಜ್ಜೀವನ ಕುರಿತು ಸಿಟಿಜನ್ ಆ್ಯಕ್ಷನ್ ಗ್ರೂಪ್ 2014ರಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ನಿರ್ದೇಶನ ನೀಡಿದೆ. 

ರಾಜ್ಯದಲ್ಲಿರುವ ಒಟ್ಟು ಕೆರೆಗಳೆಷ್ಟು ಅವುಗಳ ಒಟ್ಟು ವಿಸ್ತೀರ್ಣ ಎಷ್ಟು ಒತ್ತುವರಿಯಾಗಿರುವ ಕೆರೆಗಳು ಮತ್ತು ಅದರ ವಿಸ್ತೀರ್ಣ ಎಷ್ಟು ಆ ಪೈಕಿ ತೆರವುಗೊಳಿಸಿದ ಕೆರೆಗಳ ಮತ್ತದರ ವಿಸ್ತೀರ್ಣದ ಬಗ್ಗೆ ಜಿಲ್ಲಾವಾರು ಮಾಹಿತಿಯನ್ನೊಳಗೊಂಡ ಪ್ರಮಾಣವನ್ನು ಸಲ್ಲಿಸಲು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News