ಕನ್ನಡ ವಿವಿ ಕುಲಸಚಿವ ಪ್ರೊ.ಎ.ಸುಬ್ಬಣ್ಣ ರೈಗೆ ಕೋರ್ಟ್ ನಿಂದ ಸಮನ್ಸ್ ಜಾರಿ

Update: 2021-01-18 12:22 GMT

ಬೆಂಗಳೂರು, ಜ.18: ಕೃತಿ ಚೌರ್ಯ ಆರೋಪಕ್ಕೆ ಸಂಬಂಧಿಸಿದಂತೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಎ.ಸುಬ್ಬಣ್ಣ ರೈ ಅವರಿಗೆ ಬೆಂಗಳೂರು ಸೆಷನ್ಸ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಜತೆಗೆ ಜ.22ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. 

ಹಿರಿಯ ಸಾಹಿತಿ ಪುಸ್ತಕಮನೆ ಹರಿಹರಪ್ರಿಯ ಅವರು 1974ರಲ್ಲಿ ಬರೆದಿದ್ದ ಕುವೆಂಪು ಪತ್ರಗಳು ಪುಸ್ತಕದಿಂದ ಕುವೆಂಪು ಅವರ 62 ಪತ್ರಗಳನ್ನು ಯಥಾವತ್ತಾಗಿ ಕನ್ನಡ ವಿಶ್ವವಿದ್ಯಾಲಯ ಕುವೆಂಪು ಸಮಗ್ರ ಸಾಹಿತ್ಯದ ಹನ್ನೆರಡನೇ ಸಂಪುಟದಲ್ಲಿ ಪ್ರಕಟಿಸಿದೆ ಎಂಬ ಆರೋಪವಿದೆ.

ಹರಿಹರಪ್ರಿಯ ಅವರು 2020ರ ಡಿ.15ರಂದು ವಿಶ್ವವಿದ್ಯಾಲಯಕ್ಕೆ ಕಾನೂನು ಪ್ರಕಾರ ನೋಟಿಸ್ ಕಳುಹಿಸಿದ್ದರು. ವಿವಿಯಿಂದ ಯಾವುದೇ ಪ್ರತಿಕ್ರಿಯೆ ಬರದ ಕಾರಣ ಅವರು ಕೋರ್ಟ್ ಮೆಟ್ಟಿಲೇರಿದ್ದಾರೆ.

ವಿಶ್ವವಿದ್ಯಾಲಯದ ಸಿಂಡಿಕೇಟ್‍ನ ಸದಸ್ಯರ ಗಮನಕ್ಕೆ ವಿಷಯ ತಂದರೂ ಪ್ರಯೋಜನವಾಗಿಲ್ಲ. ವಿಧಿಯಿಲ್ಲದೆ ನ್ಯಾಯಾಲಯದ ಮೊರೆ ಹೋಗಿರುವೆ ಎಂದು ಹರಿಹರಪ್ರಿಯ ತಿಳಿಸಿದ್ದಾರೆ.

ಕುಲಸಚಿವ ಪ್ರೊ.ಎ.ಸುಬ್ಬಣ್ಣ ರೈ ಅವರು, ಸಮನ್ಸ್ ನೀಡಿರುವುದು ನಿಜ. ಸತ್ಯಶೋಧನಾ ಸಮಿತಿ ಸಭೆ ನಡೆದಿದೆ. ಇಷ್ಟರಲ್ಲೇ ಹರಿಹರಪ್ರಿಯ ಅವರಿಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News