ರಾಜ್ಯದಲ್ಲಿ ಇಂದಿನಿಂದ ಗೋಹತ್ಯೆ ನಿಷೇಧ ಕಾನೂನು ಜಾರಿ: ಸಿಎಂ ಯಡಿಯೂರಪ್ಪ

Update: 2021-01-18 14:58 GMT

ಉಡುಪಿ, ಜ.18: ಮಹಾತ್ಮ ಗಾಂಧೀಜಿಯ ರಾಮ ರಾಜ್ಯದ ಕನಸು ನನಸ್ಸಾಗುತ್ತಿದೆ. ಸ್ವಾತಂತ್ರ್ಯದ ಬಳಿಕ ಗೋಹತ್ಯೆ ನಿಷೇಧವಾಗಬೇಕೆಂದು ವ್ಯಕ್ತಪಡಿಸಿದ್ದರು ಅದರಂತೆ ರಾಜ್ಯದಲ್ಲಿ ಇಂದಿನಿಂದ ಗೋಹತ್ಯೆ ನಿಷೇಧ ಜಾರಿ ಬರಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಉಡುಪಿ ಕರಂಬಳ್ಳಿ ದೇವಸ್ಥಾನದಲ್ಲಿ ಇಂದು ಗೋಪೂಜೆ ನೆರವೇರಿಸಿದ ಬಳಿಕ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಿದ್ದರು. ಇದಕ್ಕೆ ಎಲ್ಲರೂ ಸಹಕರಿಸಬೇಕು. ನಾವು ಈ ಒಂದು ಐತಿಹಾಸಿಕ ನಿರ್ಣಯ ತೆಗೆದುಕೊಂಡಿದ್ದೇವೆ. ಇನ್ನು ಮುಂದೆ ಯಾವುದೇ ಕಾರಣಕ್ಕೂ ಗೋಹತ್ಯೆಗೆ ಅವಕಾಶ ಇರುವುದಿಲ್ಲ‌ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News