ಕೆಎಎಸ್ ಅಧಿಕಾರಿ ಡಾ.ಬಿ.ಸುಧಾ ಅಮಾನತು ?

Update: 2021-01-18 16:07 GMT

ಬೆಂಗಳೂರು, ಜ.18: ಅಕ್ರಮ ಆಸ್ತಿಗಳಿಕೆ ಆರೋಪದಡಿ ಎಸಿಬಿ ದಾಳಿ ನಡೆಸಿದ್ದ ಪ್ರಕರಣ ಸಂಬಂಧ ಕೆಎಎಸ್ ಅಧಿಕಾರಿ ಡಾ.ಬಿ.ಸುಧಾ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ.

ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಆಡಳಿತಾಧಿಕಾರಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಬಿ.ಸುಧಾ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪ ಬೆನ್ನಲ್ಲೇ ಕಳೆದ ವರ್ಷದ ನ.9ರಂದು ಎಸಿಬಿ ತನಿಖಾಧಿಕಾರಿಗಳು, ಶಾಂತಿನಗರದಲ್ಲಿರುವ ಸುಧಾ ಅವರ ಕಚೇರಿ ಸೇರಿದಂತೆ 6 ಕಡೆಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಿದ್ದರು.

ಇದಾದ ಬಳಿಕ ಸುಧಾ ಅವರು ಬಿಡಿಎ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸಂದರ್ಭದಲ್ಲಿ ಭ್ರಷ್ಟಾಚಾರವೆಸಗಿದ್ದಾರೆ ಎನ್ನುವ ಆರೋಪಗಳು ದಟ್ಟವಾಗಿ ಕೇಳಿಬಂದಿತ್ತು. ಹಾಗಾಗಿ, ರಾಜ್ಯ ಸರಕಾರ ಅವರನ್ನು ಅಮಾನತು ಮಾಡಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News