ದ.ಕ.ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ನೇತ್ರದಾನ ಅಭಿಯಾನ

Update: 2021-01-18 17:22 GMT

ಮಂಗಳೂರು, ಜ. 18: ನಗರದ ಮೇರಿಹಿಲ್‌ನಲ್ಲಿರುವ ದ.ಕ.ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಜಿಲ್ಲಾ ಗೃಹರಕ್ಷಕ ದಳ, ದ.ಕ. ಜಿಲ್ಲಾ ಪೌರರಕ್ಷಣಾ ಪಡೆ ಹಾಗೂ ಲಯನ್ಸ್ ಕ್ಲಬ್ ಮಂಗಳೂರು ಮತ್ತು ಮಾನವ ಹಕ್ಕುಗಳ ಮಹಾ ಮೈತ್ರಿ ಜಂಟಿ ಆಶ್ರಯದಲ್ಲಿ ಪ್ರಸಾದ್ ನೇತ್ರಾಲಯದ ಸಹಕಾರದೊಂದಿಗೆ ಉಚಿತ ನೇತ್ರ ತಪಾಸಣಾ ಶಿಬಿರ ಮತ್ತು ನೇತ್ರದಾನ ಅಭಿಯಾನ ಕಾರ್ಯಕ್ರಮವು ಸೋಮವಾರ ನಡೆಯಿತು.

ಅಭಿಯಾನ ಉದ್ಘಾಟಿಸಿ ಮಾತನಾಡಿದ ಶಾಸಕ ಭರತ್ ವೈ. ಶೆಟ್ಟಿ ಬೇರೆ ಬೇರೆ ವೃತ್ತಿಯಲ್ಲಿದ್ದರೂ ವೃತ್ತಿಯ ಜೊತೆಗೆ ಸಮಾಜಕ್ಕಾಗಿ ಏನಾದರೂ ಕೊಡುಗೆ ನೀಡಬೇಕೆನ್ನುವ ಗೃಹರಕ್ಷಕರ ಸೇವಾ ಮನೋಭಾವ ಇತರರಿಗೆ ಮಾದರಿಯಾಗಿದೆ ಎಂದರು.

ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಮತ್ತು ಪೌರರಕ್ಷಣಾ ತಂಡದ ಮುಖ್ಯ ಪಾಲಕ ಡಾ. ಮುರಲೀ ಮೋಹನ್ ಚೂಂತಾರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅತಿಥಿಗಳಾಗಿ ಲಯನ್ಸ್ ಪ್ರಾಂತೀಯ ಅಧ್ಯಕ್ಷ ಉಮೇಶ್ ಪ್ರಭು, ಲಯನ್ಸ್ ಕ್ಲಬ್ನ ಅಧ್ಯಕ್ಷ ಕೃಷ್ಣಾನಂದ ಪೈ, ಪ್ರಸಾದ್ ನೇತ್ರಾಲಯದ ಡಾ. ವಿಶಾಲ್ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News