ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ವಿತರಣೆ

Update: 2021-01-18 17:23 GMT

ಮಂಗಳೂರು, ಜ.18: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದಿಂದ ಪ್ರಸ್ತುತ ಸಾಲಿನಲ್ಲಿ ವಿತರಿಸಿರುವ ವಿಕಲಚೇತನರ ಬಸ್ ಪಾಸ್‌ಗಳನ್ನು ವಿತರಣೆ/ನವೀಕರಣ ಮಾಡಲು ಫೆ. 2ರವರೆಗೆ ಮಾನ್ಯ ಮಾಡಲಾಗಿರುತ್ತದೆ.

ಜ.15ರಿಂದ ವಿಕಲಚೇತನರ ಪಾಸ್‌ಗಳ ವಿತರಣೆ/ನವೀಕರಣ ಪ್ರಾರಂಭಿಸಲಾಗಿದೆ. ಹಾಗಾಗಿ ಫಲಾನುಭವಿಗಳು ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು. ಹೊಸದಾಗಿ ಪಾಸ್ ಪಡೆಯುವವರು ಪುತ್ತೂರು ವಿಭಾಗೀಯ ಕಚೇರಿಯನ್ನು ಅರ್ಜಿ ಪಡೆಯಬಹುದು. ಮಾಹಿತಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಪುತ್ತೂರು ವಿಭಾಗ ದೂ. ಸಂಖ್ಯೆ: 08251-235421ನ್ನು ಸಂಪರ್ಕಿಸಬಹುದು ಎಂದು ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News