ಸೋಮೇಶ್ವರ: ಡಿಜಿಟಲ್ ವ್ಯವಹಾರದ ತರಬೇತಿ ಕಾರ್ಯಕ್ರಮ
Update: 2021-01-18 17:38 GMT
ಸೋಮೇಶ್ವರ : ಕೌಶಲ್ಯಾಭಿವೃದ್ಧಿ , ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ದೀನ್ ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಸೋಮೇಶ್ವರ ಪುರಸಭೆ ಮತ್ತು ಬ್ಯಾಂಕ್ ಆಫ್ ಬರೋಡಾ ಜಂಟಿಯಾಗಿ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ಯೋಜನೆಯಡಿ “ನಾನೂ ಕೂಡಾ ಡಿಜಿಟಲ್” ಬೀದಿ ಬದಿ ವ್ಯಾಪಾರಿಗಳಿಗಾಗಿ ಡಿಜಿಟಲ್ ವ್ಯವಹಾರದ ತರಬೇತಿ ಕಾರ್ಯಕ್ರಮವನ್ನು ಜ.21ರಂದು ಸೋಮೇಶ್ವರ ಪುರಸಭಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಬೀದಿ ವ್ಯಾಪಾರಿಗಳು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ.