ಮಂಗಳೂರು: ಬಸ್ ಚಾಲಕನ ಕೊಲೆ ಯತ್ನ; ದೂರು

Update: 2021-01-19 15:56 GMT

ಮಂಗಳೂರು, ಜ.19: ನಗರ ಹೊರವಲಯದ ಪಡೀಲ್ ಸಮೀಪದ ಪೈಸಲ್ ನಗರ ಎಂಬಲ್ಲಿ ಖಾಸಗಿ ಬಸ್ ಚಾಲಕ ಸಂಪತ್ ಪೂಜಾರಿ ಎಂಬವರ ಮೇಲೆ ಪೆಟ್ರೋಲ್ ಎರಚಿ ಕೊಲೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.

ಬೈಕ್ ಸವಾರ ಫೈಸಲ್ ನಗರದ ಅಶ್ರಫ್‌ಗೆ ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ಬಸ್ ಚಾಲಕ ಸಂಪತ್ ಪೂಜಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News