ಸಿರಿಬೆಳಗು ಪ್ರಶಸ್ತಿಗೆ ಡಾ.ಕೃಷ್ಣಮೂರ್ತಿ ಹನೂರು, ಸಿರಿಯಮ್ಮ ಆಯ್ಕೆ
Update: 2021-01-19 17:08 GMT
ಬೆಂಗಳೂರು, ಜ.19: ನಾಡೋಜ ಸಿರಿಯಜ್ಜಿ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಥಮ ವರ್ಷದ ಸಿರಿಬೆಳಗು ರಾಜ್ಯ ಮಟ್ಟದ ಗೌರವ ಪ್ರಶಸ್ತಿಗೆ ಮೈಸೂರಿನ ಜಾನಪದ ವಿದ್ವಾಂಸ ಡಾ.ಕೃಷ್ಣಮೂರ್ತಿ ಹನೂರು ಮತ್ತು ಚಿತ್ರದುರ್ಗ ಜಿಲ್ಲೆಯ ಚೆಳ್ಳಕೆರೆ ತಾಲೂಕಿನ ಕಾಡುಗೊಲ್ಲರ ಹಟ್ಟಿಯ ಜನಪದ ಕಲಾವಿದೆ ಸಿರಿಯಮ್ಮ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು 10 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ. ಮಾರ್ಚ್ನಲ್ಲಿ ನಾಡೋಜ ಸಿರಿಯಜ್ಜಿ ಪ್ರತಿಷ್ಠಾನದ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಕಲಮರಹಳ್ಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.