ಜ.21ರಂದು ಹಳ್ಳಾಡಿಯಲ್ಲಿ ಕೃಷಿ ಮಾಹಿತಿ
Update: 2021-01-20 13:43 GMT
ಬ್ರಹ್ಮಾವರ, ಜ.20: ಉಡುಪಿ ಜಿಲ್ಲಾ ಕೃಷಿಕ ಸಂಘ ಮಂದಾರ್ತಿ ವಲಯ ಸಮಿತಿ ಆಯೋಜಿಸಿರುವ ಕೃಷಿ ಮಾಹಿತಿ ಕಾರ್ಯಕ್ರಮ ಜ.21ರ ಬೆಳಗ್ಗೆ 10:30ಕ್ಕೆ ಹಳ್ಳಾಡಿ ಶ್ರೀನಂದಿಕೇಶ್ವರ ದೇವಸ್ಥಾನ ವಠಾರದಲ್ಲಿ ನಡೆಯಲಿದೆ.
ರೈತ ಶಕ್ತಿ ಗುಂಪು ಅಧ್ಯಕ್ಷೆ ಸುಜಾತ ಎಲ್. ಶೆಟ್ಟಿ ಗಾವಳಿ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕ ರಾಜೀವ ಶೆಟ್ಟಿ ಗಾವಳಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹರ್ಕಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಸಂತಿ ಶೆಟ್ಟಿ, ಅವಿನಾಶ್ ಗಾವಳಿ, ಜಯಶ್ರೀ ಹರ್ಕಾಡಿ, ಸತೀಶ್ ಭಂಡಾರಿ ಭಾಗವಹಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾಗಿ ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು, ಪ್ರಧಾನ ಕಾರ್ಯದರ್ಶಿ ಸಾಧನಾಶೀಲ ಕೃಷಿಕ ಪ್ರಶಸ್ತಿ ವಿಜೇತ ಕುದಿ ಶ್ರೀನಿವಾಸ್ ಭಟ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.