ಪ.ಪಂಗಡದ ಮೂಲ ನಿವಾಸಿಗಳಿಗೆ ಕ್ರೀಡಾಕೂಟ/ಸಾಂಸ್ಕೃತಿಕ ಸ್ಪರ್ಧೆ

Update: 2021-01-20 13:49 GMT

ಉಡುಪಿ, ಜ.20: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಉಪಯೋಜನೆ ಅಡಿಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ವಾಸವಾಗಿರುವ ಪರಿಶಿಷ್ಟ ಪಂಗಡಕ್ಕೆ ಸೇರಿದ ಮೂಲ ನಿವಾಸಿಗಳ ಮಕ್ಕಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಹೊರತರುವ ಹಾಗೂ ಕ್ರೀಡೆಯ ಬಗ್ಗೆ ಅರಿವು ಮೂಡಿ ಸುವ ಸಲುವಾಗಿ ವಿಶೇಷ ಕ್ರೀಡಾಕೂಟ/ಸಾಂಸ್ಕೃತಿಕ ಸ್ಪರ್ಧೆಯನ್ನು ಫೆ.5ರಿಂದ 7ರ ವರೆಗೆ ಉಡುಪಿಯ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಡಾ.ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ ದೂ.ಸಂಖ್ಯೆ: 0820-2521324, ಮೊ.ನಂ:9480886467ನ್ನು ಸಂಪರ್ಕಿುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News