ಜ. 22: ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಉದ್ಘಾಟನೆ

Update: 2021-01-20 15:30 GMT

ಮಂಗಳೂರು, ಜ.20: ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ ಉದ್ಘಾಟನಾ ಸಮಾರಂಭವನ್ನು ಸುಬ್ರಹ್ಮಣ್ಯದ ಕುಮಾರಧಾರದಲ್ಲಿ ಜ.22ರಂದು ಮಧ್ಯಾಹ್ನ 3 ಗಂಟೆಗೆ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಮೀನುಗಾರಿಕೆ, ಮುಜರಾಯಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಚಿವ ಎಸ್.ಅಂಗಾರ ವಹಿಸಲಿದ್ದಾರೆ. ಅರಣ್ಯ ಸಚಿವ ಆನಂದ್ ಸಿಂಗ್, ಸಂಸದ ನಳಿನ್‌ ಕುಮಾರ್, ವಿಧಾನ ಪರಿಷತ್ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ ಗೌರವ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಜಿಲ್ಲೆಯ ಅರಣ್ಯ ಇಲಾಖಾಧಿಕಾರಿಗಳು ಭಾಗವಹಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News