ಜ. 24 : ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಪ್ಪಿನಂಗಡಿ ಶಾಖೆ ಉದ್ಘಾಟನೆ

Update: 2021-01-20 17:19 GMT

ಪುತ್ತೂರು: ಸುಳ್ಯದಲ್ಲಿ ಪ್ರಧಾನ ಕಚೇರಿ ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 14 ನೇ ನೂತನ ಶಾಖೆ ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ 17 ರ ಸರ್ವೆ ಕಾಂಪ್ಲೆಕ್ಸ್‍ನಲ್ಲಿ ಜ.24ರಂದು ಉದ್ಘಾಟನೆ ಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ತಿಳಿಸಿದ್ದಾರೆ.

ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಸುಳ್ಯ, ಮಡಿಕೇರಿ, ಪುತ್ತೂರು, ವಿಟ್ಲ, ಕಡಬ, ಮೈಸೂರು, ಮಡಿಕೇರಿ ಸೇರಿದಂತೆ 13 ಶಾಖೆಗಳನ್ನು ಹೊಂದಿದ್ದು, 14ನೇ ಶಾಖೆ ಉಪ್ಪಿನಂಗಡಿಯಲ್ಲಿ ಉದ್ಘಾಟನೆಗೊಳ್ಳಲಿದೆ. ಸೊಸೈಟಿಯ 25ನೇ ವರ್ಷಕ್ಕೆ 25 ಶಾಖೆಗಳನ್ನು ಆರಂಭಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು. 

ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶಾಖಾ ಕಚೇರಿಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟಿಸುವರು. ಭದ್ರತಾ ಕೊಠಡಿಯನ್ನು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ,  ದ.ಕ. ಜಿಲ್ಲೆ ಸಹಕಾ ಸಂಘಗಳ ಉಪನಿಬಂಧಕ ಪ್ರವೀಣ್ ನಾಯಕ್ ಗಣಕೀಕರಣ ಉದ್ಘಾಟಿಸುವರು. ಜಿಪಂ ಸದಸ್ಯೆ ಶಯನ ಜಯಾನಂದ ಪ್ರಥಮ ಉಳಿತಾಯ ಖಾತೆ ಪುಸ್ತಕ ವಿತರಣೆ, ಉಪ್ಪಿನಂಗಡಿ ವ್ಯವಸಾಯಿಕ ಸೇವಾ ಸಹಕಾರ ಸಂಘದ ಅಧ್ಯಕ್ಷ ಕೆ.ವಿ ಪ್ರಸಾದ್ ಪ್ರಥಮ ಠೇವಣಿ ಪತ್ರ ವಿತರಣೆ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ ಪ್ರಥಮ ಸಾಲ ಪತ್ರ ವಿತರಣೆ ಹಾಗೂ ಖ್ಯಾತ ವೈದ್ಯ ಡಾಬಿ.ರಘು ಪ್ರಥಮ ಪಾಲುಪತ್ರ ವಿತರಣೆ ನೆರವೇರಿಸುವರು. ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪುತ್ತೂರು ಸ್ವ ಸಹಾಯ ಸಂಘಗಳ ಟ್ದಸ್ಟ್ ಅಧ್ಯಕ್ಷ ಡಿ.ವಿ.ಮನೋಹರ, ಉಪ್ಪಿನಂಗಡಿ ಅಶ್ವಿನಿ ಹೋಂ ಎಪ್ಲುನ್ಸಸ್ ಮತ್ತು ಫರ್ನಿಚರ್ ಮ್ಹಾಲಕ ಪ್ರಕಾಶ್ ಬಿ., ಉಪ್ಪಿನಂಗಡಿ ವರ್ತಕ ಸಂಘದ ಅಧ್ಯಕ್ಷ ಆರೂನ್ ರಶೀದ್ ಅಂಗಡಿ, ಉಪ್ಪಿನಂಗಡಿ ಸರ್ವೆ ಕಾಂಪ್ಲೆಕ್ಸ್ ಮ್ಹಾಲಕ ಶರೀಫ್ ಸರ್ವೆ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಮೋಹನ್ ರಾವ್ ಸುಳ್ಳಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News