ಗೋಕರ್ಣ : ಸಮುದ್ರದಲ್ಲಿ ಮುಳುಗಿ ಮೂವರು ಮೃತ್ಯು

Update: 2021-01-21 14:19 GMT

ಗೋಕರ್ಣ : ಕಡಲ ತೀರದಲ್ಲಿ ಈಜಲು ಇಳಿದ ಬೆಂಗಳೂರು ಮೂಲದ ಪ್ರವಾಸಿಗರು ಅಲೆಯ ರಭಸಕ್ಕೆ ಕೊಚ್ಚಿ ಹೋಗಿ ನೀರಿನಲ್ಲಿ ಮುಳುಗಿ ಮೂವರು ಮೃತಪಟ್ಟ ಘಟನೆ ಗುರುವಾರ ನಡೆದಿದೆ.

ಮೃತರನ್ನು ಬೆಂಗಳೂರಿನ ಹೆಬ್ಬಗೋಡಿ, ತಿರುಪಾಲ್ಯದ ಸುಮಾ (21), ತಿಪ್ಪೇಶ್ ನಾಯಕ್ (20) ಮತ್ತು ರವಿ (35) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ 16 ಜನರ ತಂಡ ಗೋಕರ್ಣಕ್ಕೆ ಪ್ರವಾಸಕ್ಕೆ ಬಂದಿದ್ದು, ನಂತರ ಸಮುದ್ರದಲ್ಲಿ ಆಟವಾಡುತ್ತಿದ್ದ ಐವರು ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗಿದ್ದರು ಎನ್ನಲಾಗಿದ್ದು, ಈ ವೇಳೆ ಅಲ್ಲಿನ ಲೈಫ್ ಗಾರ್ಡ್ ಇಬ್ಬರನ್ನು ರಕ್ಷಿಸಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ದೂರಲಾಗಿದೆ. 

ಈ ಬಗ್ಗೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News