ಉಡುಪಿ: ಅಂಬಿಗರ ಚೌಡಯ್ಯ ಜಯಂತಿ

Update: 2021-01-21 15:01 GMT

ಉಡುಪಿ, ಜ.21: ಜಿಲ್ಲಾಡಳಿತ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಿವಯೋಗಿ ಸಿದ್ಧರಾಮೇಶ್ವರ, ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು.

ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು ಸಿದ್ಧರಾಮೇಶ್ವರ, ವೇಮನ ಹಾಗೂ ಅಂಬಿಗರ ಚೌಡಯ್ಯ ಭಾಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಎಂಜಿಎಂ ಕಾಲೇಜಿನ ಉಪನ್ಯಾಸಕಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಉಪನ್ಯಾಸ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News