ಹುಣಸೋಡು ಸ್ಫೋಟದಲ್ಲಿ ಕಾರ್ಮಿಕರ ಸಾವು: ಪ್ರಧಾನಿ ತೀವ್ರ ಸಂತಾಪ

Update: 2021-01-22 04:32 GMT

ಬೆಂಗಳೂರು, ಜ.22: ಶಿವಮೊಗ್ಗ ಜಿಲ್ಲೆಯ ಹುಣಸೋಡು ಬಳಿ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ಗುರುವಾರ ರಾತ್ರಿ ಭಾರೀ ಸ್ಫೋಟ ಸಂಭವಿಸಿ, ಕಾರ್ಮಿಕರು ಸಾವನ್ನಪ್ಪಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

‘ಶಿವಮೊಗ್ಗ ಸ್ಫೋಟದಲ್ಲಿ ಜೀವಗಳು ಬಲಿಯಾಗಿರುವುದು ನೋವು ತಂದಿದೆ. ಸಂತ್ರಸ್ತ ಕುಟುಂಬಗಳಿಗೆ ಸಂತಾಪ ತಿಳಿಸುವೆ, ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಕರ್ನಾಟಕ ಸರಕಾರವು ಸಾಧ್ಯವಿರುವ ಎಲ್ಲ ರೀತಿಯ ಸಹಕಾರಗಳನ್ನೂ ನೀಡುತ್ತಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಪರವಾಗಿ ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News