ಮಂಗಳೂರಿನ ಪಿಲಿಕುಳದಲ್ಲಿ ಫೆ.19ರಿಂದ ರಾಜ್ಯ ಮಟ್ಟದ ವಿಜ್ಞಾನ ಸಾಹಿತ್ಯ ಕಮ್ಮಟ

Update: 2021-01-22 12:44 GMT

ಬೆಂಗಳೂರು, ಜ. 22: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ವಿಜ್ಞಾನ ಸಾಹಿತ್ಯ ರಾಜ್ಯಮಟ್ಟದ ಮೂರು ದಿನಗಳ ಕಮ್ಮಟವನ್ನು ಮಂಗಳೂರಿನ ಪಿಲಿಕುಳದಲ್ಲಿರುವ ವಿಜ್ಞಾನ ಕೇಂದ್ರದಲ್ಲಿ ಫೆ.19ರಿಂದ ಫೆ.21ರವರೆಗೆ ಆಯೋಜಿಸಲಾಗಿದೆ.

20 ರಿಂದ 45 ವರ್ಷ ವಯಸ್ಸುಳ್ಳ ರಾಜ್ಯದ ಎಲ್ಲ ಭಾಗದ ಅಭ್ಯರ್ಥಿಗಳು ಜ.30ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಕಮ್ಮಟದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‍ಸೈಟ್ http://karnatakasahithyaacademy.org ನಿಂದ ಅರ್ಜಿ ನಮೂನೆ ಪಡೆದುಕೊಳ್ಳಲು ಸೂಚಿಸಿದೆ.

ಹೆಚ್ಚಿನ ಮಾಹಿತಿಗಾಗಿ ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಅಥವಾ ದೂರವಾಣಿ ಸಂಖ್ಯೆ-080-22211730/22106460 ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News