ಸಕಾಲ ಸೇವೆಯಡಿ ತೋಟಗಾರಿಕೆ ಇಲಾಖೆಯ ವಿವಿಧ ಸೇವೆ ಅಳವಡಿಕೆ

Update: 2021-01-22 15:00 GMT

ಉಡುಪಿ, ಜ.22: ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮದಡಿ ತೋಟ ಗಾರಿಕೆ ಇಲಾಖೆಯ ಮಣ್ಣು ವಿಶ್ಲೇಷಣೆ, ನೀರು ವಿಶ್ಲೇಷಣೆ, ಎಲೆ ವಿಶ್ಲೇಷಣೆ ಹಾಗೂ ಸಾವಯವ ವಿಶ್ಲೇಷಣೆ ಸೇವೆಗಳನ್ನು ಅಳವಡಿಸಲಾಗಿದೆ.

ಈ ಸೇವೆಗಳನ್ನು ಪಡೆಯಲು ಇಚ್ಛಿಸುವ ರೈತರು ಹತ್ತಿರದ ಸೇವಾಸಿಂಧು ಕೇಂದ್ರಗಳ ಮುಖಾಂತರ ತಂತ್ರಾಂಶದಲ್ಲಿ ನೊಂದಾಯಿಸಿ, ನಿಗಧಿತ ಶುಲ್ಕ ಪಾವತಿಸಿ, ಆನ್‌ಲೈನ್‌https://serviceonline.gov.in/karnataka ನಲ್ಲಿ ಅರ್ಜಿಗಳನ್ನು ಸಲ್ಲಿಸಿ, ಸಂಬಂಧಪಟ್ಟ ಮಾದರಿಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಸಸ್ಯ ಪೋಷಕಾಂಶ, ಜೈವಿಕ ಕೇಂದ್ರ, ಅಂಚೆ ಪೆಟ್ಟಿಗೆ ಸಂಖ್ಯೆ: 7648, ಹುಳಿಮಾವು, ಬನ್ನೇರುಘಟ್ಟ ಮುಖ್ಯ ರಸ್ತೆ, ಬೆಂಗಳೂರು-560076 ವಿಳಾಸಕ್ಕೆ ಸಲ್ಲಿಸಬೇಕು. ಮಾದರಿ ಸ್ವೀಕರಿಸಿದ ನಂತರ ನಿಗದಿತ ಅವಧಿಯೊಳಗೆ ವಿಶ್ಲೇಷಣಾ ವರದಿಯನ್ನು ಆನ್‌ಲೈನ್‌ನಲ್ಲಿ ಪಡೆಯ ಬಹುದು.

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪ ನಿರ್ದೇಶಕರು ಜಿಲ್ಲಾ ಪಂಚಾ ಯತ್ ಉಡುಪಿ ದೂರವಾಣಿ ಸಂಖ್ಯೆ: 0820-2531950, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಉಡುಪಿ ತಾಲೂಕು ದೂರವಾಣಿ ಸಂಖ್ಯೆ: 0820-2522837, ಕುಂದಾಪುರ ತಾಲೂಕು ದೂರವಾಣಿ ಸಂಖ್ಯೆ: 08254-230813, ಕಾರ್ಕಳ ತಾಲೂಕು ದೂರವಾಣಿ ಸಂಖ್ಯೆ: 08258 -230288 ಅನ್ನು ಸಂಪರ್ಕಿಸುವಂತೆ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News