ಜ.28ರಿಂದ ಎಸಿಬಿ ಅಧಿಕಾರಿಗಳು ತಾಲೂಕು ಕೇಂದ್ರಕ್ಕೆ ಭೇಟಿ

Update: 2021-01-22 15:14 GMT

ಮಂಗಳೂರು, ಜ.22: ದ.ಕ. ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಉಪಾಧೀಕ್ಷಕ ಕೆ.ಸಿ. ಪ್ರಕಾಶ್, ಪೊಲೀಸ್ ನಿರೀಕ್ಷಕ ರಾದ ಶ್ಯಾಮ್ ಸುಂದರ್ ಎಚ್.ಎಂ. ಮತ್ತು ಗುರುರಾಜ್ ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಿಗೆ ಜ.28, 29 ಮತ್ತು 30ರಂದು ಭೇಟಿ ನೀಡಿ, ಜನಸಂಪರ್ಕ ಸಭೆ ನಡೆಸಲಿದ್ದಾರೆ.

ಜ.28ರಂದು ಬೆಳಗ್ಗೆ 11 ಗಂಟೆಗೆ ಸುಳ್ಯ ಸರಕಾರಿ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2:30ಕ್ಕೆ ಪುತ್ತೂರು ಸರಕಾರಿ ನಿರೀಕ್ಷಣಾ ಮಂದಿರ, ಜ.29ರಂದು ಬೆಳಗ್ಗೆ 11 ಗಂಟೆಗೆ ಬೆಳ್ತಂಗಡಿ ಸರಕಾರಿ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2:30ಕ್ಕೆ ಬಂಟ್ವಾಳ ಸರಕಾರಿ ನಿರೀಕ್ಷಣಾ ಮಂದಿರ ಹಾಗೂ ಜ.30ರಂದು ಬೆಳಗ್ಗೆ 11 ಗಂಟೆಗೆ ಮೂಡುಬಿದಿರೆ ಸರಕಾರಿ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಭ್ರಷ್ಟಾಚಾರ ನಿಯಂತ್ರಣಕ್ಕೆ ಸಂಬಂಧಿಸಿದ ಮಾಹಿತಿ ನೀಡಿ ನಂತರ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 0824-2483000ನ್ನು ಸಂಪರ್ಕಿಸಬಹುದು ಎಂದು ಪೊಲೀಸ್ ಉಪಾಧೀಕ್ಷಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News