ಜ.25ರಂದು ಕೃಷಿ ಕಾಯ್ದೆ ವಿರುದ್ಧ ಕಾಂಗ್ರೆಸ್‌ನಿಂದ ಪ್ರತಿಭಟನಾ ಪ್ರದರ್ಶನ

Update: 2021-01-22 16:46 GMT

ಮಂಗಳೂರು, ಜ.22: ದ.ಕ. ಜಿಲ್ಲೆಯ ಎಲ್ಲ ವಿಧಾನ ಸಭಾ ಕ್ಷೇತ್ರಗಳಲ್ಲಿ ಜ.25ರಂದು ರೈತ ಹೋರಾಟವನ್ನು ಬೆಂಬಲಿಸಿ ಹಾಗೂ ರೈತ ವಿರೋಧಿ ಕೃಷಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನಾ ಪ್ರದರ್ಶನ ಹಮ್ಮಿಕೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಕೆಪಿಸಿಸಿ ವತಿಯಿಂದ ಬೃಹತ್ ಪ್ರತಿಭಟನಾ ಪ್ರದರ್ಶನ ಬೆಂಗಳೂರಿನಲ್ಲಿ ನಡೆದಿದೆ. ದಿಲ್ಲಿಯಲ್ಲಿ ಕಳೆದ ಮೂರು ತಿಂಗಳಿನಿಂದ ಪ್ರತಿಭಟನೆ ನಡೆಯುತ್ತಿದ್ದರೂ ಸರಕಾರ ರೈತರ ಮನವಿಗೆ ಪುರಸ್ಕಾರ ನೀಡಿಲ್ಲ. ಈ ಹಿನ್ನೆಲೆಯಲ್ಲಿ ರೈತರಿಗೆ ನೈತಿಕ ಬೆಂಬಲ ನೀಡುವುದು ಮತ್ತು ರೈತ ವಿರೋಧಿ ಕಾನೂನು ಜಾರಿ ಮಾಡದಂತೆ ಆಗ್ರಹಿಸಿ ಈ ಪ್ರತಿಭಟನೆ ನಡೆಯಲಿದೆ ಎಂದು ಹರೀಶ್ ಕುಮಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News