ಕಾಸರಗೋಡು : ಹಾಡಹಗಲೇ ವ್ಯಕ್ತಿಯನ್ನು ಥಳಿಸಿ ಕೊಲೆಗೈದ ದುಷ್ಕರ್ಮಿಗಳ ಗುಂಪು

Update: 2021-01-23 10:39 GMT
ಮುಹಮ್ಮದ್ ರಫೀಕ್

ಕಾಸರಗೋಡು: ಹಾಡಹಗಲೇ ಗುಂಪೊಂದು ವ್ಯಕ್ತಿಯೋರ್ವನನ್ನು ಥಳಿಸಿ ಕೊಲೆಗೈದ ದಾರುಣ ಘಟನೆ ಶನಿವಾರ ಮಧ್ಯಾಹ್ನ ಕಾಸರಗೋಡು ನಗರದಲ್ಲಿ ನಡೆದಿದೆ.

ಮೃತರನ್ನು ಚೆಮ್ನಾಡ್ ದೇಳಿಯ ಮುಹಮ್ಮದ್ ರಫೀಕ್ (48) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ನಗರದ ಖಾಸಗಿ ಆಸ್ಪತ್ರೆ ಸಮೀಪ ಈ ಘಟನೆ ನಡೆದಿದೆ.

ರಫೀಕ್ ಅವರು ಆಸ್ಪತ್ರೆ ಸಮೀಪದ ಮೆಡಿಕಲ್ ಸ್ಟೋರ್ ನಲ್ಲಿ ಔಷಧಿ ಖರೀದಿಸುತ್ತಿದ್ದ ಸಂದರ್ಭ ಗುಂಪೊಂದು ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ರಫೀಕ್ ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಕಾಸರಗೋಡು ಡಿವೈ.ಎಸ್.ಪಿ.  ಪಿ.ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ತಂಡ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News