ಪುತ್ತೂರು: ಬಾವಿಗೆ ಬಿದ್ದು ಯುವಕ ಮೃತ್ಯು

Update: 2021-01-23 12:29 GMT

ಪುತ್ತೂರು: ಆವರಣವಿಲ್ಲದ ಬಾವಿಗೆ ಯುವಕನೋರ್ವ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಪುತ್ತೂರು ತಾಲೂಕಿನ ವೀರಮಂಗಲ ಎಂಬಲ್ಲಿ ನಡೆದಿದೆ.

ವೀರಮಂಗಲ ನಿವಾಸಿ ದಿ. ಹುಕ್ರ ಎಂಬವರ ಪುತ್ರ ಕೂಲಿ ಕೆಲಸ ಮಾಡುತ್ತಿದ್ದ ಬಾಲಕೃಷ್ಣ(29) ಮೃತಪಟ್ಟ ಯುವಕ. ಬಾಲಕೃಷ್ಣ ಅವರು ಕೆಲಸ ಮುಗಿಸಿ ಸಂಜೆ ಮನೆಗೆ ಹಿಂದಿರುಗುತ್ತಿದ್ದ ವೇಳೆಯಲ್ಲಿ ಘಟನೆ ನಡೆದಿದ್ದು, ಸಂಜೆ ಮನೆಗೆ ಬಾರದ ಕಾರಣ ಅವರನ್ನು ಸ್ಥಳೀಯರು ಹುಡುಕಾಟ ನಡೆಸಿದಾಗ ಅವರ ಮೃತದೇಹ ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿತ್ತು. 
ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News