ರಾಜ್ಯದಲ್ಲಿಂದು 902 ಕೊರೋನ ಪ್ರಕರಣಗಳು ದೃಢ: 3 ಮಂದಿ ಸಾವು

Update: 2021-01-23 17:11 GMT

ಬೆಂಗಳೂರು, ಜ.23: ರಾಜ್ಯದಲ್ಲಿ ಶನಿವಾರ 902 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಮೂವರು ಸೋಂಕಿಗೆ ಬಲಿಯಾಗಿದ್ದು, 542 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 9,35,478ಕ್ಕೆ ತಲುಪಿದ್ದು, 157 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.

ಇಲ್ಲಿಯವರೆಗೆ ಕೊರೋನ ಸೋಂಕಿಗೆ 12,193 ಜನರು ಸಾವನ್ನಪ್ಪಿದ್ದಾರೆ. ಸಕ್ರಿಯ ಕೊರೋನ ಪ್ರಕರಣಗಳ ಸಂಖ್ಯೆ 7,342ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ಮೂವರು ಬಲಿ: ಬೆಂಗಳೂರು ನಗರ 1, ಕಲಬುರಗಿ 1, ತುಮಕೂರಿನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 902 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 2, ಬಳ್ಳಾರಿ 11, ಬೆಳಗಾವಿ 23, ಬೆಂಗಳೂರು ಗ್ರಾಮಾಂತರ 11, ಬೆಂಗಳೂರು ನಗರ 527, ಬೀದರ್ 8, ಚಾಮರಾಜನಗರ 4, ಚಿಕ್ಕಬಳ್ಳಾಪುರ 19, ಚಿಕ್ಕಮಗಳೂರು 2, ಚಿತ್ರದುರ್ಗ 23, ದಕ್ಷಿಣ ಕನ್ನಡ 31, ದಾವಣಗೆರೆ 13, ಧಾರವಾಡ 15, ಗದಗ 1, ಹಾಸನ 19, ಹಾವೇರಿ 2, ಕಲಬುರಗಿ 39, ಕೊಡಗು 9, ಕೋಲಾರ 4, ಕೊಪ್ಪಳ 1, ಮಂಡ್ಯ 9, ಮೈಸೂರು 51, ರಾಯಚೂರು 1, ಶಿವಮೊಗ್ಗ 19, ತುಮಕೂರು 24, ಉಡುಪಿ 10, ಉತ್ತರ ಕನ್ನಡ 15, ವಿಜಯಪುರ 7, ಯಾದಗಿರಿ ಜಿಲ್ಲೆಯಲ್ಲಿ 2 ಪ್ರಕರಣ ಪತ್ತೆಯಾಗಿವೆ.

ರಾಜಧಾನಿಯಲ್ಲಿ 527 ಕೊರೋನ ಪ್ರಕರಣ ದೃಢ

ರಾಜಧಾನಿಯಲ್ಲಿ ಶನಿವಾರದಂದು 527 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಒಬ್ಬರು ಮೃತಪಟ್ಟಿದ್ದಾರೆ. 274 ಸೋಂಕಿತರು ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 3,96,827 ಕೊರೋನ ಸೋಂಕಿತರು ದೃಢಪಟ್ಟಿದ್ದು, 4,376 ಜನರು ಸೋಂಕಿಗೆ ಬಲಿಯಾಗಿದ್ದಾರೆ. 3,87,600 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News