ಪ್ರೊ.ಶೇಷಗಿರಿರಾವ್ ವಿಮರ್ಶಾ ಪ್ರಶಸ್ತಿಗೆ ನಾಗಭೂಷಣ, ವಿ.ನಾಗರಾಜರಾವ್ ಮಾಧ್ಯಮ ಪ್ರಶಸ್ತಿಗೆ ರಾಜಶೇಖರ್ ಆಯ್ಕೆ

Update: 2021-01-23 18:04 GMT

ಬೆಂಗಳೂರು, ಜ.23: ಬಿಎಂಶ್ರೀ ಪ್ರತಿಷ್ಠಾನವು ಕೊಡಮಾಡುವ 2021ರ ಪ್ರೊ.ಎಲ್.ಎಸ್.ಶೇಷಗಿರಿರಾವ್ ವಿಮರ್ಶಾ ಪ್ರಶಸ್ತಿಗೆ ವಿಮರ್ಶಕ ಡಾ.ಓ.ಎಲ್.ನಾಗಭೂಷಣ ಹಾಗೂ ವಿ.ನಾಗರಾಜರಾವ್ ಸಮೂಹ ಮಾಧ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಡಿ.ವಿ.ರಾಜಶೇಖರ್ ಆಯ್ಕೆಯಾಗಿದ್ದಾರೆ.

ಪ್ರೊ.ಎಲ್.ಎಸ್.ಶೇಷಗಿರಿರಾವ್ ವಿಮರ್ಶಾ ಪ್ರಶಸ್ತಿಗಾಗಿ ಡಾ.ಎಚ್.ದಂಡಪ್ಪ, ಚ.ಹ.ರಘುನಾಥ್ ಅವರನ್ನೊಳಗೊಂಡ ಆಯ್ಕೆ ಸಮಿತಿ, ಹಾಗೆಯೇ ವಿ.ನಾಗರಾಜರಾವ್ ಸಮೂಹ ಮಾಧ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತರಾದ ಹನೀಫ್ ಮತ್ತು ಬಸವರಾಜು ಮೇಗಲಕೇರಿ ಅವರನ್ನೊಳಗೊಂಡ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು.

ಈ ಎರಡು ಪ್ರಶಸ್ತಿಗಳು ತಲಾ 10 ಸಾವಿರ ರೂ. ನಗದು, ಸ್ಮರಣಿಕೆಗಳನ್ನೊಳಗೊಂಡಿದ್ದು, ಫೆ.21ರಂದು ಬೆಳಗ್ಗೆ ನಗರದ ಎಂವಿಸಿ ಸಭಾಂಗಣದಲ್ಲಿ ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News