ತೊಕ್ಕೊಟ್ಟು: ಅಪರಿಚಿತ ವಾಹನ ಢಿಕ್ಕಿ; ಪಾಣೆಮಂಗಳೂರು ನಿವಾಸಿ ಮೃತ್ಯು

Update: 2021-01-24 04:35 GMT

ಉಳ್ಳಾಲ, ಜ.24: ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟುವಿನಲ್ಲಿ ನಡೆದಿದೆ.

ಮೃತರನ್ನು ಪಾಣೆಮಂಗಳೂರು ನಿವಾಸಿ ಹಮ್ಮಬ್ಬ(60) ಎಂದು ಗುರುತಿಸಲಾಗಿದೆ. ಅವರು ಇಂದು ಬೆಳಗ್ಗೆ ತೊಕ್ಕೊಟ್ಟಿನ ಸಹರಾ ಆಸ್ಪತ್ರೆಯ ಎದುರು ಹೆದ್ದಾರಿ ದಾಟುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ ಎಂದು ಹೇಳಲಾಗಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಹಮ್ಮಬ್ಬ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. 

ಹಮ್ಮಬ್ಬ ತೊಕ್ಕೊಟ್ಟು ಬಳಿಯ ಕಲ್ಲಾಪುವಿನಲ್ಲಿರುವ ಸಂಬಂಧಿಕರ ಮ‌ನೆಗೆ ಬಂದಿದ್ದರೆನ್ನಲಾಗಿದೆ.

ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News