ಹಾಲಾಡಿ: ತೆಂಗಿನಮರದಿಂದ ಬಿದ್ದು ಮೃತ್ಯು

Update: 2021-01-24 17:18 GMT

ಶಂಕರನಾರಾಯಣ, ಜ.24: ತೆಂಗಿನ ಮರದಿಂದ ಬಿದ್ದು ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಜ.24ರಂದು ಬೆಳಗ್ಗೆ ಹಾಲಾಡಿ ಗ್ರಾಮದ ಚೇರ್ಕಿ ಎಂಬಲ್ಲಿ ನಡೆದಿದೆ.

ಮೃತರನ್ನು ಉದಯ ಕುಲಾಲ್(42) ಎಂದು ಗುರುತಿಸಲಾಗಿದೆ. ಇವರು ಮಹಾಬಲ ನಾಯ್ಕ ಎಂಬವರ ಮನೆಗೆ ಕೃಷಿ ಕೂಲಿ ಕೆಲಸಕ್ಕೆ ಹೋಗಿದ್ದು, ಅಲ್ಲಿ ತೆಂಗಿನ ಮರದ ಕಾಯಿ ತೆಗೆಯುತ್ತಿರುವಾಗ ಆಕಸ್ಮಿಕವಾಗಿ ಕೈ ಜಾರಿ ಕೆಳಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ಅವರು, ಕುಂದಾಪುರದ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News