ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ

Update: 2021-01-24 17:34 GMT

ಮಡಿಕೇರಿ, ಜ.24: ಕೊಡಗು ಜಿಲ್ಲಾ ಪತ್ರಕರ್ತರ ಸಂಘದ 2019ನೇ ಸಾಲಿನ 17 ವಿಭಾಗದ ವಾರ್ಷಿಕ ಪ್ರಶಸ್ತಿಯನ್ನು 12 ಪತ್ರಕರ್ತರಿಗೆ ಪ್ರದಾನ ಮಾಡಲಾಯಿತು. 

ನಗರದ ಪತ್ರಿಕಾ ಭವನದಲ್ಲಿ ಸಂಘದ ಅಧ್ಯಕ್ಷೆ ಸವಿತಾ ರೈ ಅಧ್ಯಕ್ಷತೆಯಲ್ಲಿ ನಡೆದ ನಡೆದ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತೋಟಗಾರಿಕಾ ಪ್ರಶಸ್ತಿ ಶಕ್ತಿ ಪತ್ರಿಕೆಯ ಉಪಸಂಪಾದಕ ಕಾಯಪಂಡ ಶಶಿ ಸೋಮಯ್ಯ ಹಾಗೂ ಅತ್ಯುತ್ತಮ ತನಿಖಾ ವರದಿ ಪ್ರಶಸ್ತಿಯನ್ನು ಐಮಂಡ ಗೋಪಾಲ್ ಸೋಮಯ್ಯ ಪಡೆದುಕೊಂಡರು. 

ರಾಜಕೀಯ, ಹುಲಿ ಸಂರಕ್ಷಣೆ ಪ್ರಶಸ್ತಿಗೆ ವಿಜಯವಾಣಿಯ ಸಣ್ಣುವಂಡ ಕಿಶೋರ್ ನಾಚಪ್ಪ, ಕೃಷಿ, ಮಾನವೀಯ ವರದಿ ಪ್ರಶಸ್ತಿಗೆ ವಿಜಯವಾಣಿಯ ಪಳೆಯಂಡ ಪಾರ್ಥ ಚಿಣ್ಣಪ್ಪ, ಸೇನೆಗೆ ಸಂಬಂಧಿಸಿದ ದೃಶ್ಯ ಮಾಧ್ಯಮ ಪ್ರಶಸ್ತಿಯನ್ನು ದಿಗ್ವಿಜಯ ಚಾನಲ್‍ನ ಬಾಚರಣಿಯಂಡ ಅನುಕಾರ್ಯಪ್ಪ, ಗ್ರಾಮೀಣ ವರದಿ ಪ್ರಶಸ್ತಿಯನ್ನು ಪ್ರಜಾಸತ್ಯದ ಹಿರಿಕರ ರವಿ, ಕ್ರೀಡಾ ವರದಿ, ಅರಣ್ಯ ವನ್ಯಜೀವಿ ಪ್ರಶಸ್ತಿಯನ್ನು ಪ್ರಜಾವಾಣಿಯ ರೆಜಿತ್‍ಕುಮಾರ್, ಅತ್ಯುತ್ತಮ ವಿಡಿಯೋಗ್ರಾಫಿ ಪ್ರಶಸ್ತಿಯನ್ನು ಚಿತ್ತಾರ ವಾಹಿನಿಯ ವಿಶ್ವ ಕುಂಬೂರು, ಆರೋಗ್ಯ ವರದಿ, ಫೋಟೋಗ್ರಾಫಿ ಪ್ರಶಸ್ತಿಯನ್ನು ಹೆಚ್.ಜೆ.ರಾಕೇಶ್, ಪರಿಸರ ಮತ್ತು ನೈರ್ಮಲ್ಯ ಪ್ರಶಸ್ತಿಯನ್ನು ವಾರ್ತಾಭಾರತಿ ಪತ್ರಿಕೆಯ ಮುಸ್ತಫಾ, ಹೈನುಗಾರಿಕೆ ಪ್ರಶಸ್ತಿಯನ್ನು ಕನ್ನಡಪ್ರಭ ವರದಿಗಾರ ಆರ್.ಸುಬ್ರಮಣಿ, ಶೈಕ್ಷಣಿಕ ಪ್ರಶಸ್ತಿಯನ್ನು ಕನ್ನಡಪ್ರಭದ ವಿಘ್ನೇಶ್ ಭೂತನಕಾಡು, ಅರಣ್ಯ ವನ್ಯಜೀವಿ ದೃಶ್ಯಮಾಧ್ಯಮ ಪ್ರಶಸ್ತಿಯನ್ನು ಐಮಂಡ ಗೋಪಾಲ್ ಸೋಮಯ್ಯ ಪಡೆದುಕೊಂಡರು. 

ಎಐಸಿಸಿ ವಕ್ತಾರ ಬ್ರಿಜೇಶ್ ಕಾಳಪ್ಪ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಅನುಕಾರ್ಯಪ್ಪ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News