ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಚಳವಳಿಗೆ ಅನುಮತಿ ಇಲ್ಲ: ಪೊಲೀಸ್ ಆಯುಕ್ತ ಕಮಲ್ ಪಂತ್
Update: 2021-01-25 10:28 GMT
ಬೆಂಗಳೂರು, ಜ.25: ನಾಳಿನ(ಜ.26) ಟ್ರ್ಯಾಕ್ಟರ್ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳಿನ ಟ್ರ್ಯಾಕ್ಟರ್ ರ್ಯಾಲಿಗೆ ಅನುಮತಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಜ.26ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ಕೆಲವರು ಅರ್ಜಿ ನೀಡಿದ್ದಾರೆ. ಆ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಅಲ್ಲದೆ, ಸಾಂಕೇತಿಕವಾಗಿಯೂ ಟ್ರ್ಯಾಕ್ಟರ್ನಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ. ಈ ಹಿಂದೆಯೂ ಟ್ರ್ಯಾಕ್ಟರ್ ಮೂಲಕ ನಗರದಲ್ಲಿ ಪ್ರತಿಭಟನೆ ಆಗಿಲ್ಲ ಎಂದರು.