ರೈತ ಚಳವಳಿಗೆ ಬೆಂಬಲ : ಜ.26ರಂದು ಉಡುಪಿಯಲ್ಲಿ ಕಾಲ್ನಡಿಗೆ ಜಾಥ

Update: 2021-01-25 16:14 GMT

ಉಡುಪಿ, ಜ.25: ರೈತ ವಿರೋಧಿ ಕರಾಳ ಮಸೂದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ದೇಶವ್ಯಾಪಿ ನಡೆಸುತ್ತಿರುವ ಚಳವಳಿಗೆ ಬೆಂಬಲವಾಗಿ ಉಡುಪಿಯ ಸಾಮಾಹಿಕ ಸಂಘಟನೆಗಳ ಐಕ್ಯ ವೇದಿಕೆಯ ನೇತೃತ್ವದಲ್ಲಿ ಕಾಲ್ನಡಿಗೆ ಜಾಥವನ್ನು ಹಮ್ಮಿಕೊಳ್ಳಲಾಗಿದೆ.

 ಜ.26ರಂದು ಮಧ್ಯಾಹ್ನ 3.30ಕ್ಕೆ ಉಡುಪಿಯ ಬೋರ್ಡ್ ಹೈಸ್ಕೂಲ್‌ನಿಂದ ಆರಂಭಗೊಳ್ಳುವ ಜಾಥವು ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಸಮಾಪ್ತಿ ಗೊಳ್ಳಲಿದೆ. ಬಳಿಕ ಅಲ್ಲೇ ಪ್ರತಿಭಟನೆ ಸಭೆ ನಡೆಯಲಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಸುಂದರ್ ಮಾಸ್ತರ್, ಶ್ಯಾಮ್ ರಾಜ್ ಬಿರ್ತಿ ಹಾಗೂ ಜಿಲ್ಲಾ ಮಸ್ಲಿಮ್ ಒಕ್ಕೂಟದ ಹುಸೇನ್ ಕೊೀಡಿಬೆಂಗ್ರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಬೆಂಬಲ: ಈ ಕಾಲ್ನಡಿಗೆ ಜಾಥಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಜಾಥದಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News