ಒರಿಸ್ಸಾ ಮೂಲದ ಮೀನುಗಾರ ನಾಪತ್ತೆ

Update: 2021-01-25 16:29 GMT

ಮಂಗಳೂರು, ಜ.25: ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ಮೀನುಗಾರ ನಾಪತ್ತೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದೆ.

ಒಡಿಶಾ ಮೂಲದ ನರೇಂದ್ರ ಸಾಯಿ (32) ನಾಪತ್ತೆಯಾದವರು.

ಬೆಂಗರೆ ನಿವಾಸಿ ಕೇಶವ ಸಾಲ್ಯಾನ್ ಎಂಬವರಿಗೆ ಸೇರಿದ ಹನುಮಾನ್ ಬೋಟಿನಲ್ಲಿ ಜ.21ರಂದು ರಾತ್ರಿ 9 ಮಂದಿ ಮೀನುಗಾರಿಕೆಗೆ ತೆರಳಿದ್ದರು. ಸುಮಾರು 40ನಾಟಿಕಲ್ ದೂರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದಾಗ ನರೇಂದ್ರ ಎಂಬವರು ನಾಪತ್ತೆಯಾಗಿದ್ದಾರೆ. ವಿಷಯ ತಿಳಿದ ಬಳಿಕ ಎಲ್ಲಿ ಹುಡುಕಿದರೂ ಪ್ರಯೋಜನವಾಗಲಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಬೋಟಿನ ಚಾಲಕ ಎಂ. ಪಾಂಡಿ ಎಂಬವರು ಪಾಂಡೇಶ್ವರ ಠಾಣೆಗೆ ಪೊಲೀಸ್ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News