ಮಾಧುಸ್ವಾಮಿ ಮನವೊಲಿಕೆಗೆ ಸಿಎಂ ಯಡಿಯೂರಪ್ಪ ಯತ್ನ: ಮತ್ತೊಮ್ಮೆ ಖಾತೆ ಬದಲಾವಣೆ

Update: 2021-01-25 16:57 GMT

ಬೆಂಗಳೂರು, ಜ.25: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೂವರು ಸಚಿವರಿಗೆ ಪುನಃ ಖಾತೆಗಳನ್ನು ಹಂಚಿಕೆ ಮಾಡಿ ಸೋಮವಾರ ಆದೇಶ ಹೊರಡಿಸಿದ್ದಾರೆ.

ಇಂದು ಬೆಳಗ್ಗೆ ಜೆ.ಸಿ.ಮಾಧುಸ್ವಾಮಿಗೆ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ, ಆನಂದ್ ಸಿಂಗ್- ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಹಾಗೂ ಡಾ.ಕೆ.ಸುಧಾಕರ್ ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೀಡಿ ಆದೇಶ ಹೊರಡಿಸಿದ್ದರು.

ಆದರೆ, ಮಾಧುಸ್ವಾಮಿ ಈ ಖಾತೆಗಳ ಜವಾಬ್ದಾರಿ ವಹಿಸಿಕೊಳ್ಳಲು ನಿರಾಕರಿಸಿ, ಮುಖ್ಯಮಂತ್ರಿಯ ಸಂಪರ್ಕಕ್ಕೆ ಸಿಗದೆ ಮೌನ ವಹಿಸಿದ್ದರು. ಕಡೆಗೂ ಮಾಧುಸ್ವಾಮಿ ಮನವೊಲಿಸಲು ಮುಂದಾದ ಮುಖ್ಯಮಂತ್ರಿ, ಸಿ.ಪಿ.ಯೋಗೇಶ್ವರ್ ಗೆ ಹಂಚಿಕೆ ಮಾಡಿದ್ದ ಸಣ್ಣ ನೀರಾವರಿ ಇಲಾಖೆಯನ್ನು ಮಾಧುಸ್ವಾಮಿಗೆ ಹಂಚಿಕೆ ಮಾಡಿದ್ದಾರೆ.

ಮಾಧುಸ್ವಾಮಿಗೆ ನೀಡಿದ್ದ ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿ ಶಾಸ್ತ್ರ ಇಲಾಖೆಯನ್ನು ಸಿ.ಪಿ.ಯೋಗೇಶ್ವರ್ ಗೆ ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News