ಎಪ್ರಿಲ್-ಮೇನಲ್ಲಿ ಮತ್ತೆ ಸಂಪುಟ ವಿಸ್ತರಣೆ: ಸಚಿವ ರಮೇಶ್ ಜಾರಕಿಹೊಳಿ

Update: 2021-01-25 18:04 GMT

ಬೆಂಗಳೂರು, ಜ. 25: ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ ಬೇಗುದಿಯ ಸಮಯದಲ್ಲೇ ಜಲಸಂಪನ್ಮೂಲಕ ಸಚಿವ ರಮೇಶ್ ಜಾರಕಿಹೊಳಿ, ಎಪ್ರಿಲ್ ಅಥವಾ ಮೇ ತಿಂಗಳಲ್ಲಿನ ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿ ಸಚಿವರಾಗುವುದು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.

ಸೋಮವಾರ ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಪ್ರಿಲ್ ಅಥವಾ ಮೇ ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಆ ಸಂದರ್ಭದಲ್ಲಿ ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ದೊರೆಯಲಿದೆ ಎಂದು ಇದೇ ಸಂದರ್ಭದಲ್ಲಿ ಭರವಸೆ ವ್ಯಕ್ತಪಡಿಸಿದರು.

ಅಣ್ಣ-ತಮ್ಮಂದಿರ ಜಗಳ: ಕೆಲ ಸಚಿವರು ಖಾತೆ ಅದಲು-ಬದಲು ಜಗಳ ಒಂದು ರೀತಿಯಲ್ಲಿ ಅಣ್ಣ ತಮ್ಮಂದಿರ ಜಗಳವಿದ್ದಂತೆ ಶೀಘ್ರದಲ್ಲೆ ಬಗೆಹರಿಯಲಿದೆ ಎಂದ ಅವರು, ಸಚಿವರು ಒಳ ಜಗಳ, ಅಸಮಾಧಾನ, ಮುನಿಸು ಸಹಜ. ಕೆಲ ದಿನಗಳಲ್ಲಿ ಇವೆಲ್ಲವೂ ಸರಿಯಾಗಲಿವೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News