72ನೇ ಗಣರಾಜ್ಯೋತ್ಸವದ ಅಂಗವಾಗಿ ಸಿಎಂ ಯಡಿಯೂರಪ್ಪ ಧ್ವಜಾರೋಹಣ

Update: 2021-01-26 05:09 GMT

ಬೆಂಗಳೂರು : 72ನೆ ಗಣರಾಜ್ಯೋತ್ಸವದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಧ್ವಜಾರೋಹಣ ನೆರವೇರಿಸಿದರು.

ನಮ್ಮ ಸಂವಿಧಾನ ನಮ್ಮ ಹೆಮ್ಮೆ. ನಮ್ಮ ಶ್ರೇಷ್ಠ ಸಂವಿಧಾನವೇ ನಮ್ಮ ಪ್ರಜಾಪ್ರಭುತ್ವದ ಭದ್ರ ಬುನಾದಿ. ಸಂವಿಧಾನದ ಸದಾಶಯಗಳಿಗೆ ಅನುಗುಣವಾಗಿಯೇ ನಮ್ಮ ಅಸ್ಮಿತೆ ರೂಪುಗೊಳ್ಳಬೇಕು ಎಂದು ಹೇಳಿದರು.

ನಗರದ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪೆರೇಡ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸಿದ ರಾಜ್ಯಪಾಲ ವಜುಬಾಯಿ ವಾಲಾ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News