ಗಾಝಿಪುರ್: ಪ್ರತಿಭಟನಾನಿರತ ರೈತರ ಮೇಲೆ ಅಶ್ರುವಾಯು ಪ್ರಯೋಗಿಸಿದ ಪೊಲೀಸರು

Update: 2021-01-26 05:35 GMT

ಹೊಸದಿಲ್ಲಿ,ಜ.26: ಭಾರತ ದೇಶವು 72ನೆ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದು, ಈ ನಡುವೆ ಕೇಂದ್ರ ಸರಕಾರದ ನೂತನ ವಿವಾದಾತ್ಮಕ ಕೃಷಿಕಾಯ್ದೆಗಳ ವಿರುದ್ಧ ರೈತರು ದಿಲ್ಲಿಯಲ್ಲಿ ಟ್ರ್ಯಾಕ್ಟರ್‌ ಮಾರ್ಚ್‌ ಹಮ್ಮಿಕೊಂಡಿದ್ದಾರೆ. ಈಗಾಗಲೇ ಪೊಲೀಸರ ಬಿಗಿ ಭದ್ರತೆಯ ನಡುವೆ ಟ್ರ್ಯಾಕ್ಟರ್‌ ಪರೇಡ್‌ ಆರಂಭವಾಗಿದೆ. ಇದೀಗ ಪ್ರತಿಭಟನಾನಿರತ ರೈತರ ಮೇಲೆ ಅಶ್ರುವಾಯು ಪ್ರಯೋಗಿಸಲಾಗಿದೆ ಎಂದು thequint.com ವರದಿ ಮಾಡಿದೆ. 

ಗಾಝಿಪುರ್‌ ಸಮೀಪ ರೈತರು ಪ್ರತಿಭಟನೆ ನಡೆಸುತ್ತಾ, ಟ್ರ್ಯಾಕ್ಟರ್‌ ಪರೇಡ್‌ ಪ್ರಾರಂಭಿಸಿದ್ದು, ಈ ವೇಳೆ ಮೇಲಿನಿಂದ ಪೊಲೀಸರು ಅಶ್ರುವಾಯು ಪ್ರಯೋಗಿಸುತ್ತಿರುವ ವೀಡಿಯೋ ಟ್ವಿಟರ್‌ ನಲ್ಲಿ ವೈರಲ್‌ ಆಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News