ಗಣರಾಜ್ಯೋತ್ಸವ ಟ್ರಾಕ್ಟರ್‌ ರ‍್ಯಾಲಿ: ಓರ್ವ ಪ್ರತಿಭಟನಾನಿರತ ರೈತ ಮೃತ್ಯು

Update: 2021-01-26 09:27 GMT

ಹೊಸದಿಲ್ಲಿ,ಜ.26: ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕೆಂಬ ನಿಟ್ಟಿನಲ್ಲಿ ರೈತರು ಗಣರಾಜ್ಯೋತ್ಸವ ದಿನವಾದ ಇಂದು ರಾಷ್ಟ್ರ ರಾಜಧಾನಿ ದಿಲ್ಲಿಗೆ ಟ್ರ್ಯಾಕ್ಟರ್‌ ರ್ಯಾಲಿಯನ್ನು ಹಮ್ಮಿಕೊಂಡಿದ್ದು, ಸದ್ಯ ಹಿಂಸಾಚಾರಕ್ಕೆ ತಿರುಗಿದೆ. ಇದೀಗ ಐಟಿಒ ಪ್ರತಿಭಟನಾ ಸ್ಥಳದಲ್ಲಿ ರೈತನೋರ್ವ ಮೃತಪಟ್ಟಿದ್ದಾನೆ ಎಂದು thewire.in ವರದಿ ಮಾಡಿದೆ.

ಪೊಲೀಸರ ಗುಂಡೇಟಿನಿಂದ ಟ್ರಾಕ್ಟರ್‌ ಚಲಾಯಿಸುತ್ತಿದ್ದ ವ್ಯಕ್ತಿಯು ನಿಯಂತ್ರಣ ತಪ್ಪಿ ಟ್ರಾಕ್ಟರ್‌ ಮಗುಚಿದ್ದು, ಪರಿಣಾಮ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಸ್ಥಳದಲ್ಲಿರುವ ರೈತರು ಆರೋಪಿಸಿದರೆ, ಟ್ರಾಕ್ಟರ್‌ ಮಗುಚಿದ ಕಾರಣದಿಂದ ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿಕೆ ನೀಡಿದ್ದಾಗಿ ವರದಿ ತಿಳಿಸಿದೆ. ಸದ್ಯ ಪರಿಸ್ಥಿತಿಯು ನಿಯಂತ್ರಣದಲ್ಲಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News