ಯಾವುದೇ ಸಮಸ್ಯೆಗೆ ಹಿಂಸೆ ಪರಿಹಾರವಲ್ಲ: ರಾಹುಲ್ ಗಾಂಧಿ
Update: 2021-01-26 10:02 GMT
ಹೊಸದಿಲ್ಲಿ: ಯಾವುದೇ ಸಮಸ್ಯೆಗೆ ಹಿಂಸೆ ಪರಿಹಾರವಲ್ಲ ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ,ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಕೇಂದ್ರ ಸರಕಾರವನ್ನು ಕೇಳಿಕೊಂಡಿದ್ದಾರೆ.
ದಿಲ್ಲಿಯಲ್ಲಿ ಇಂದು ನಡೆಯಬೇಕಾಗಿದ್ದ ರೈತರ ಟ್ರ್ಯಾಕ್ಟರ್ ರ್ಯಾಲಿ ಹಿಂಸಾರೂಪ ಪಡೆದಿರುವ ಹಿನ್ನೆಲೆಯಲ್ಲಿ ರಾಹುಲ್ ಹಿಂದಿಯಲ್ಲಿ ಇಂದು ಟ್ವೀಟಿಸಿದರು.
ಶಾಂತಿಗಾಗಿ ಗಂಭೀರ್ ಕರೆ
ಈಶಾನ್ಯ ದಿಲ್ಲಿಯ ಬಿಜೆಪಿ ಸಂಸದ ಗೌತಮ್ ಗಂಭೀರ್ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸುತ್ತಾ, ಹಿಂಸಾಚಾರ ಹಾಗೂ ವಿಧ್ವಂಸಕತೆಯು ನಮ್ಮನ್ನು ಎಲ್ಲಿಯೂ ಕರೆದೊಯ್ಯಲಾರದು. ಶಾಂತಿ ಹಾಗೂ ಗೌರವ ಕಾಪಾಡಿಕೊಳ್ಳಲು ಪ್ರತಿಯೊಬ್ಬರಲ್ಲೂ ಕೇಳಿಕೊಳ್ಳುವೆ. ಇಂದು ಇಂತಹ ಅವ್ಯವಸ್ಥೆ ಸೃಷ್ಟಿಸುವಂತಹ ದಿನವಲ್ಲ ಎಂದು ಟ್ವೀಟಿಸಿದ್ದಾರೆ.
हिंसा किसी समस्या का हल नहीं है। चोट किसी को भी लगे, नुक़सान हमारे देश का ही होगा।
— Rahul Gandhi (@RahulGandhi) January 26, 2021
देशहित के लिए कृषि-विरोधी क़ानून वापस लो!