ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಣರಾಜ್ಯೋತ್ಸವ

Update: 2021-01-26 11:15 GMT

ಮಂಗಳೂರು, ಜ. 26: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ  ಗಣರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವು ನಗರದ  ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆಯಿತು.

ಜಿಲ್ಲಾಧ್ಯಕ್ಷ ಹಾಗೂ ಎಂಎಲ್ ಸಿ ಕೆ ಹರೀಶ್ ಕುಮಾರ್ ಧ್ವಜಾರೋಹಣಗೈದರು. ಬಳಿಕ ಮಾತನಾಡಿದ ಅವರು, ರೈತರ ಪ್ರತಿಭಟನೆ ಈ ಸಮಯದಲ್ಲಿ ನಡೆಯುತ್ತಿರುವುದು ಖೇದಕರ. ಕೇಂದ್ರ ಸರಕಾರ ರೈತರ ಹೋರಾಟಕ್ಕೆ ಸ್ಪಂದನೆ ನೀಡುತ್ತಿಲ್ಲ. ಇದು ಖಂಡನೀಯ. ರೈತರ ಹೋರಾಟಕ್ಕೆ ಬೆಂಬಲ ಕೊಡಬೇಕಾದದ್ದು ಎಲ್ಲರ ಕರ್ತವ್ಯ ಎಂದರು.

ಅತಿಥಿಯಾಗಿ ಮಾಜಿ ಸಚಿವ ಯುಟಿ ಖಾದರ್, ಮನಪಾ ವಿರೋಧ ಪಕ್ಷದ ನಾಯಕ‌ ಅಬ್ದುಲ್ ರವೂಫ್  ಸುರೇಶ್ ಶೆಟ್ಟಿ, ನವೀನ್ ಭಂಡಾರಿ, ಕಳ್ಳಿಗೆ ತಾರಾನಾಥ್ ಶೆಟ್ಟಿ, ಶಾಹುಲ್ ಹಮೀದ್, ನವೀನ್ ಡಿಸೋಜ, ಮುಹಮ್ಮದ್ ಮೋನು, ಶಶಿಧರ್ ಹೆಗ್ಡೆ, ಅಬ್ದುಲ್ ಸಲೀಂ ಜೆ, ವಿಶ್ವಾಸ್ ಕುಮಾರ್ ದಾಸ್, ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News