ಕೋಲ್ಕತಾದ ಅಪೋಲೊ ಆಸ್ಪತ್ರೆಗೆ ದಾಖಲಾದ ಸೌರವ್ ಗಂಗುಲಿ

Update: 2021-01-27 10:09 GMT

ಕೋಲ್ಕತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗುಲಿ ಅವರಿಗೆ ಮತ್ತೊಮ್ಮೆ ಎದೆನೋವು ಕಾಣಿಸಿಕೊಂಡ ಕಾರಣ  ಕೋಲ್ಕತದ ಅಪೋಲೊ ಆಸ್ಪತ್ರೆಗೆ ಬುಧವಾರ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ಭಾರತದ ಮಾಜಿ ನಾಯಕ ಇತ್ತೀಚೆಗೆ ಎದೆ ನೋವು ಕಾಣಿಸಿಕೊಂಡ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕ ಆ್ಯಂಜಿಯೋಪ್ಲಾಸ್ಟಿಗೆ ಒಳಗಾಗಿದ್ದರು. ವೈದ್ಯರುಗಳು ಐದು ದಿನಗಳ ಕಾಲ ನಿರಂತರ ನಿಗಾವಹಿಸಿದ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಸ್ವಲ್ಪ ದಿನ ಬಿಟ್ಟು ಸ್ಟೆಂಟ್ ಅಳವಡಿಸಲಾಗುವುದು ಎಂದು  ಗಂಗುಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವಾಗ ವೈದ್ಯರು ಹೇಳಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News