ಶಾಂತಿಯುತ ಪ್ರತಿಭಟನೆಗಳನ್ನು ಗೌರವಿಸುವುದು ಮುಖ್ಯ: ವಿಶ್ವಸಂಸ್ಥೆ

Update: 2021-01-27 15:03 GMT

ವಿಶ್ವಸಂಸ್ಥೆ, ಜ.27: ದಿಲ್ಲಿಯಲ್ಲಿ ಮಂಗಳವಾರ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನಾನಿರತ ರೈತರ ಟ್ರಾಕ್ಟರ್ ರ‍್ಯಾಲಿಯಲ್ಲಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್ ಅವರು,ಶಾಂತಿಯುತ ಮತ್ತು ಅಹಿಂಸಾತ್ಮಕ ಪ್ರತಿಭಟನೆಗಳನ್ನು ಗೌರವಿಸುವುದು ಮುಖ್ಯವಾಗಿದೆ ಎಂದು ಹೇಳಿದ್ದಾರೆ.

ಭಾರತದಲ್ಲಿಯ ಘರ್ಷಣೆಗಳ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಗುಟೆರಸ್ ಅವರ ವಕ್ತಾರ ಸ್ಟೀಫನ್ ಡುಜಾರಿಕ್ ಅವರು,ಇಂತಹ ಹಲವಾರು ಪ್ರಕರಣಗಳಲ್ಲಿ ನಾವು ಹೇಳಿರುವಂತೆ,ಶಾಂತಿಯುತ ಪ್ರತಿಭಟನೆಗಳು,ಸಮಾವೇಶಗೊಳ್ಳುವ ಸ್ವಾತಂತ್ರ್ಯ ಮತ್ತು ಅಹಿಂಸೆಯನ್ನು ಗೌರವಿಸುವುದು ಮುಖ್ಯವಾಗಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News