ದ.ಕ.ಜಿಲ್ಲಾ 24ನೇ ಕನ್ನಡ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಡಾ. ಎಂ. ಪ್ರಭಾಕರ ಜೋಶಿ ಆಯ್ಕೆ

Update: 2021-01-27 15:05 GMT

ಮಂಗಳೂರು, ಜ.27: ನಗರದ ಕೋಡಿಯಾಲ್‌ಬೈಲ್‌ನ ಶಾರದಾ ವಿದ್ಯಾಲಯದಲ್ಲಿ ಫೆ.12,13,14ರಂದು ನಡೆಯುವ ದ.ಕ. ಜಿಲ್ಲಾ 24ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ವಿದ್ವಾಂಸ, ಯಕ್ಷಗಾನ ಅರ್ಥದಾರಿ ಡಾ.ಎಂ. ಪ್ರಭಾಕರ ಜೋಶಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ತಿಳಿಸಿದ್ದಾರೆ.

ಅಲ್ಲದೆ ಡಾ.ಜೋಶಿ ಅವರ ಮನೆಗೆ ಕಸಾಪ ಪದಾಧಿಕಾರಿಗಳ ನಿಯೋಗವು ಭೇಟಿ ನೀಡಿ ಶುಭಹಾರೈಸಿತು.
ಈ ಸಂದರ್ಭ ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ ಎ.ಸಿ. ಭಂಡಾರಿ, ಬಂಟ್ವಾಳ ತಾಲೂಕು ಕಸಾಪ ಅಧ್ಯಕ್ಷ ಕೆ. ಮೋಹನ್ ರಾವ್, ಮಂಗಳೂರು ತಾಲೂಕು ಕಸಾಪ ಅಧ್ಯಕ್ಷೆ ಜಯಲಕ್ಷ್ಮಿ ಬಿ. ಶೆಟ್ಟಿ, ಗೌರವ ಕೋಶಾಧ್ಯಕ್ಷೆ ಪೂರ್ಣಿಮಾ ರಾವ್ ಪೇಜಾವರ, ಪೊಳಲಿ ನಿತ್ಯಾನಂದ ಕಾರಂತ, ಎಕ್ಕಾರು ಪದ್ಮನಾಭ ಭಟ್, ಶಿವಶಂಕರ್, ಪ್ರಭಾಕರ ಪ್ರಭು ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News