ಚುನಾವಣೆಗಾಗಿ ಕಾಂಗ್ರೆಸ್ ರೈತರನ್ನು ಬಳಸಿಕೊಳ್ಳುತ್ತಿದೆ: ಶ್ರೀರಾಮುಲು
Update: 2021-01-27 17:25 GMT
ಬೆಳಗಾವಿ, ಜ.27: ಕಾಂಗ್ರೆಸ್ ದೇಶದಲ್ಲಿ ಮುಂದೆ ನಡೆಯುವ ಚುನಾವಣೆಗಳನ್ನು ಗೆಲ್ಲುವುದಕ್ಕಾಗಿ ರೈತರ ಮೂಲಕ ಬಿಜೆಪಿಗೆ ಕೆಟ್ಟ ಹೆಸರು ತರಲು ಮುಂದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸದಿಲ್ಲಿಯಲ್ಲಿ ಹಿಂದೆಂದೂ ನಡೆಯದ ರೀತಿಯಲ್ಲಿ ಕೆಂಪು ಕೋಟೆಗೆ ನುಗ್ಗಿ ರೈತರು ಪ್ರತಿಭಟನೆ ನಡೆಸುವುದಕ್ಕೆ ಕಾಂಗ್ರೆಸ್ನ ಕುಮ್ಮಕ್ಕೇ ಕಾರಣವಾಗಿದೆ. ಇವರ ಷಡ್ಯಂತ್ರಗಳು ಫಲಿಸುವುದಿಲ್ಲವೆಂದು ತಿಳಿಸಿದ್ದಾರೆ.
ದೇಶದ ಎಲ್ಲ ರಾಜ್ಯಗಳಲ್ಲೂ ಕಾಂಗ್ರೆಸ್ ಆಡಳಿತ ಕಳೆದುಕೊಳ್ಳುತ್ತಿದೆ. ಹೀಗಾಗಿ ಅವರು ಸದ್ಯ ನಿರುದ್ಯೋಗಿಗಳಾಗಿರುವುದರಿಂದ ರೈತರ ಮೂಲಕ ಬಿಜೆಪಿಗೆ ಮಸಿ ಬಳಿಯುವುದಕ್ಕೆ ಹೊರಟ್ಟಿದ್ದಾರೆ. ಇದು ಜನರ ಅರಿವಿಗೆ ಬಂದಿದೆ. ಇವರ ಮಾತನ್ನು ಯಾರೂ ಕೇಳುವುದಿಲ್ಲ. ನೆನ್ನೆ ಹೊಸದಿಲ್ಲಿಯಲ್ಲಿ ನಡೆದ ಗಲಭೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.