ರೈತರ ಟ್ರ್ಯಾಕ್ಟರ್‌ ರ‍್ಯಾಲಿಯ ವೇಳೆ ಗಾಯಗೊಂಡ ಪೊಲೀಸರನ್ನು ಭೇಟಿಯಾದ ಗೃಹಸಚಿವ ಅಮಿತ್‌ ಶಾ

Update: 2021-01-28 08:05 GMT
photo: ANI

ಹೊಸದಿಲ್ಲಿ,ಜ.28: ಗಣರಾಜ್ಯೋತ್ಸವ ದಿನದಂದು ರೈತರು ಆಯೋಜಿಸಿದ್ದ ಟ್ರ್ಯಾಕ್ಟರ್‌ ರ‍್ಯಾಲಿಯು ಹಿಂಸಾತ್ಮಕ ರೂಪಕ್ಕೆ ತಿರುಗಿ ಹಲವಾರು ಅನಾಹುತಗಳು ಸಂಭವಿಸಿದ್ದವು. ಈ ವೇಳೆ ಹಲವಾರು ರೈತರು ಹಾಗೂ ಪೊಲೀಸರು ಗಾಯಗೊಂಡಿದ್ದರು. ಟ್ರ್ಯಾಕ್ಟರ್‌ ಮಗುಚಿದ ಪರಿಣಾಮ ಓರ್ವ ರೈತ ಮೃತಪಟ್ಟಿದ್ದರು. ಇದೀಗ ಪ್ರಕರಣದಲ್ಲಿ ಗಾಯಗೊಂಡಿರುವ ಪೊಲೀಸರನ್ನು ಗೃಹಸಚಿವ ಅಮಿತ್‌ ಶಾ ಭೇಟಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಗಾಯಗೊಂಡಿರುವ ಪೊಲೀಸರು ತೀರತ್‌ ನ ರಾಮ್‌ ಶಾ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಪೊಲೀಸರೊಂದಿಗೆ ಮಾತನಾಡಿ ಸಾಂತ್ವನ ಹೇಳಿದ್ದಾಗಿ ವರದಿಗಳು ತಿಳಿಸಿವೆ. ಒಟ್ಟು ಮುನ್ನೂರಕ್ಕೂ ಹೆಚ್ಚು ಮಂದಿ ಪೊಲೀಸರು ಘಟನೆಯಲ್ಲಿ ಗಾಯಗೊಂಡಿದ್ದಾಗಿ ndtv.com ವರದಿ ತಿಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 2000ಕ್ಕೂ ಹೆಚ್ಚು ಮಂದಿ ಪ್ರತಿಭಟನಕಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News