ಜ.31: ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ -ಜಾಗೃತಿ ಶಿಬಿರ

Update: 2021-01-28 12:32 GMT

ಮಂಗಳೂರು : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ವತಿಯಿಂದ ಕಡಬ ತಾಲೂಕು ಪತ್ರಕರ್ತರ ಸಂಘದ ಆತಿಥ್ಯ ದಲ್ಲಿ, ಜಿಲ್ಲಾಡಳಿತ, ವಿವಿಧ ಇಲಾಖೆಗಳ ಮತ್ತು ವಿವಿಧ ಸಂಘ ಸಂಸ್ಥೆಗಳ  ಸಹಕಾರ ದೊಂದಿಗೆ 'ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರ' ಜ.31ರಂದು ಕೊಂಬಾರು ದ.ಕ.ಜಿ.ಪಂ.ಉ.ಹಿ.ಪ್ರಾ. ಶಾಲೆಯಲ್ಲಿ ನಡೆಯಲಿದೆ.

ಜಿಲ್ಲೆಯ ಹಿಂದುಳಿದ  ಗ್ರಾಮವೊಂದನ್ನು ಗುರುತಿಸಿ, ಅಲ್ಲಿಗೆ ಜಿಲ್ಲೆಯ ಪತ್ರಕರ್ತರು ಭೇಟಿ ನೀಡಿ, ಆ ಗ್ರಾಮದ ಜನರ ಸಮಸ್ಯೆ ಗಳನ್ನು ತಿಳಿದುಕೊಂಡು ಅಧಿಕಾರಿಗಳು, ಜನಪ್ರತಿನಿಧಿಗಳ ಸಹಕಾರದೊಂದಿಗೆ ಜನರ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ನೆರವಾಗುವುದು, ಗ್ರಾಮದ ಸುಸ್ಥಿರ ಅಭಿವೃದ್ಧಿಗೆ ಪೂರಕವಾದ ಪರಿಸರ ಸಂರಕ್ಷಣೆ, ಶಿಕ್ಷಣ ,ಆರೋಗ್ಯ  ಜಾಗೃತಿ ಕಾರ್ಯಕ್ರಮ ಗಳೊಂದಿಗೆ ಗ್ರಾಮದ ಪಾರಂಪರಿಕ ಜ್ಞಾನ, ಸಾಂಸ್ಕೃತಿಕ ಮೌಲ್ಯ ಗಳನ್ನು ಮುಂದಿನ ತಲೆಮಾರಿಗೂ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಶ್ರಮಿಸುವುದು, ಮಾಧ್ಯಮಗಳ ಮೂಲಕ ಆ ಗ್ರಾಮದ ಬಗ್ಗೆ ಬೆಳಕು ಚೆಲ್ಲುವುದು ಮತ್ತು ಗ್ರಾಮೀಣ ಪ್ರದೇಶದ  ಬೆಳವಣಿಗೆಗೆ  ಶ್ರಮಿಸುವ ಸಾಮೂಹಿಕ ಪ್ರಯತ್ನದ ಪರಿಕಲ್ಪನೆ  ಪತ್ರಕರ್ತರ ಗ್ರಾಮ ವಾಸ್ತವ್ಯದ ಮುಖ್ಯ ಉದ್ದೇಶವಾಗಿದೆ. 

ಪ್ರಥಮ ಗ್ರಾಮ ವಾಸ್ತವ್ಯ ಬೆಳ್ತಂಗಡಿಯ ಕುತ್ಲೂರಿನಲ್ಲಿ ಮತ್ತು ಎರಡನೆ ಗ್ರಾಮ ವಾಸ್ತವ್ಯ ಸುಳ್ಯದ ಮಡಪ್ಪಾಡಿಯಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆದಿದೆ. ಇದೀಗ ಕಡಬ ತಾಲೂಕಿನ ಸಿರಿಬಾಗಿಲು-ಕೊಂಬಾರುವಿನಲ್ಲಿ ಮೂರನೇ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಸಿದ್ಧತೆ ನಡೆದಿದೆ.

ಶಿಬಿರದಲ್ಲಿ ಏನೆಲ್ಲಾ ಇದೆ ?

ಈ ಬಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಯೋಗ ಗುರು  ಡಾ.ಎಂ. ಜಗದೀಶ್ ಶೆಟ್ಟಿ ಬಿಜೈ ಅವರಿಂದ ‘ಯೋಗ ಪ್ರದರ್ಶನ’ ,  ಖ್ಯಾತ ಜಾದೂಗಾರ ರಾಜೇಶ್ ಮಳಿ ಅವರಿಂದ ‘ಇಂದ್ರಜಾಲ ಪ್ರದರ್ಶನ’ , ಮಂಗಳೂರಿನ ಎ.ಜೆ.ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಹಾಗೂ ಎ.ಜೆ.ಆಸ್ಪತ್ರೆ ಯ  ತಜ್ಞ ವೈದ್ಯರ ತಂಡದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ ಆಶ್ರಯದಲ್ಲಿ ರಕ್ತ ಗುಂಪು ವರ್ಗೀಕರಣ, ರಕ್ತದಾನ ಮತ್ತು ಜಾಗೃತಿ ಶಿಬಿರ, ಸ್ವಚ್ಛ ಪರಿಸರ, ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನ, ಸರಕಾರದ ವಿವಿಧ ಇಲಾಖೆಗಳಿಗೆ ಸಂಬಂಧಿಸಿ ಗ್ರಾಮಸ್ಥರಿಂದ ಅರ್ಜಿಗಳ ಸ್ವೀಕಾರ, ಆಧಾರ್ ನೋಂದಣಿ , ತಿದ್ದುಪಡಿ ಸೌಲಭ್ಯ, ಆಯುಷ್ಮಾನ್ ಭಾರತ್ ಮತ್ತು ಆರೋಗ್ಯ ಕರ್ನಾಟಕ ಕಾರ್ಡ್ ಗೆ  ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಪುತ್ತೂರು ಅಂಚೆ ವಿಭಾಗದ  ಸಹಾಯಕ ಅಧೀಕ್ಷಕರಾದ  ಜೋಸೆಫ್ ರೋಡ್ರಿಗಸ್  ಅವರು   ಅಂಚೆ ಇಲಾಖೆಯ ವಿವಿಧ ಸವಲತ್ತುಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಪತ್ರಕರ್ತರ ಗ್ರಾಮ ವಾಸ್ತವ್ಯದ ಉದ್ಘಾಟನೆಯನ್ನು  ಗ್ರಾಮೀಣಾವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ನೆರವೇರಿಸಲಿರುವರು. ಆರೋಗ್ಯ ತಪಾಸಣಾ ಶಿಬಿರವನ್ನು ಬಂದರು ಮತ್ತು ಮೀನುಗಾರಿಕಾ ಸಚಿವ  ಎಸ್.ಅಂಗಾರ ಉದ್ಘಾಟಿಸು ವರು. ಕುತ್ಲೂರು ಮತ್ತು ಮಡಪ್ಪಾಡಿಯಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯದ ಮಾಹಿತಿ ಕೈಪಿಡಿ ಯನ್ನು  ಮಂಗಳೂರು ಶಾಸಕ  ಯು.ಟಿ.ಖಾದರ್ ಬಿಡುಗಡೆಗೊಳಿಸಲಿರುವರು.

ಸ್ವಚ್ಛ ಪರಿಸರ,ಪ್ಲಾಸ್ಟಿಕ್ ಮುಕ್ತ ಗ್ರಾಮ ಅಭಿಯಾನಕ್ಕೆ  ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಚಾಲನೆ ನೀಡಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ  ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಸಮಾರಂಭ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಶಾಸಕರಾದ ಸಂಜೀವ ಮಠಂದೂರು , ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಎಸ್.ಎಲ್. ಭೋಜೇಗೌಡ, ದ.ಕ.ಜಿ. ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಆರಣ್ಯ ಉಪ  ಸಂರಕ್ಷಣಾಧಿಕಾರಿ, ಡಾ.ವಿ.ಕರಿಕಲನ್ , ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ , ಕಡಬ ತಹಶೀಲ್ದಾರ್ ಅನಂತ ಶಂಕರ,   ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ,  ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಎ.ಜೆ.ಸಮೂಹ ಸಂಸ್ಥೆ ಯ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ, ಎಜೆ, ವೈದ್ಯಕೀಯ ಮಹಾ ವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಯ ಡೀನ್  ಡಾ.ಅಶೋಕ್,  ಇಂಡಿಯನ್ ರೆಡ್   ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎ.ಶಾಂತಾರಾಮ ಶೆಟ್ಟಿ, ಗೌರವ ಕಾರ್ಯದರ್ಶಿ ಕೆ.ಎ.ಪ್ರಭಾಕರ ಶರ್ಮ, ಏಶ್ಯನ್ ಪತ್ರಕರ್ತರ ಒಕ್ಕೂಟದ ಸಂಚಾಲಕ ಹೆಚ್.ಬಿ. ಮದನ ಗೌಡ, ಕೆಯುಡಬ್ಲ್ಯುಜೆ  ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ  ಆರ್.ರವಿಕುಮಾರ್ ,  ಜಗನ್ನಾಥ ಶೆಟ್ಟಿ ಬಾಳ, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ ಭಾಗವಹಿಸಲಿರುವರು. ಅಧಿಕಾರಿಗಳೊಂದಿಗೆ  ಸಂವಾದ ದ.ಕ.ಜಿಲ್ಲಾಧಿಕಾರಿ ಡಾ.ಕೆ.ಎ.ರಾಜೇಂದ್ರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಡಾ.ಭರತ್ ಶೆಟ್ಟಿ ವೈ, ಉಮಾನಾಥ ಎ. ಕೋಟ್ಯಾನ್,  ರಾಜೇಶ್ ನಾಯ್ಕ ಯು, ವಿಧಾನ ಪರಿಷತ್ ಸದಸ್ಯ ರಾದ ಹರೀಶ್ ಕುಮಾರ್, ಬಿ.ಎಂ.ಫಾರೂಕ್, ತಾ.ಪಂ.ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ, ಮೆಸ್ಕಾಂ ಆಡಳಿತ ನಿರ್ದೇಶಕ ರಾದ ಪ್ರಶಾಂತ್ ಕುಮಾರ್ ಮಿಶ್ರಾ, ಅಧೀಕ್ಷಕ ಇಂಜಿನಿಯರ್ ಮಂಜಪ್ಪ, ಪುತ್ತೂರು ಎಎಸ್ಪಿ ಲಖನ್ ಸಿಂಗ್ ಯಾದವ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್,  ಕೆನರಾ ಬ್ಯಾಂಕ್ ನ ಮಹಾಪ್ರಬಂಧಕ  ಯೋಗೀಶ್ ಆಚಾರ್ಯ, ಪೊಲೀಸ್ ವೃತ್ತನಿರೀಕ್ಷಕ, ಉಮೇಶ್ ಉಪ್ಪಳಿಕೆ, ಜಿ.ಪಂ.ಸದಸ್ಯ ಪಿ. ಪಿ. ವರ್ಗೀಸ್, ತಾ.ಪಂ.ಸದಸ್ಯೆ ಆಶಾ ಲಕ್ಷ್ಮಣ, ಕೊಂಬಾರು ಗ್ರಾ.ಪಂ.ಆಡಳಿತಾಧಿಕಾರಿ ಸಜಿ ಕುಮಾರ್, ಪ್ರಭಾರ ಪಿಡಿಒ ಪಿ. ರಾಘವೇಂದ್ರ ಗೌಡ, ಜಾಗತಿಕ ಬಂಟರ  ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಿಳಿನೆಲೆ ಸಹಕಾರ ಸಂಘದ ಅಧ್ಯಕ್ಷ ದಾಮೋದರ ಗುಂಡ್ಯ,  ಕೊಂಬಾರು ಎಸ್ ಡಿಎಂಸಿ ಅಧ್ಯಕ್ಷ ಶಿವಪ್ರಸಾದ್ ಭಾಗವಹಿಸಲಿದ್ದಾರೆ. ಪತ್ರಕರ್ತರಿಂದ ಕ್ಷೇತ್ರ ಭೇಟಿ, ಪರಿಸರ ಅಧ್ಯಯನ  ಊರಿನ ಹಿರಿಯರೊಂದಿಗೆ ಪತ್ರಕರ್ತರ ಚಾವಡಿ ಚರ್ಚೆ ನಡೆಯಲಿದೆ. ಈ ಬಾರಿ  ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ಜಿಲ್ಲೆಯ  ಪತ್ರಕರ್ತರು ಪಾಲ್ಗೊಳ್ಳಲಿದ್ದಾರೆ.

ಪತ್ರಿಕಾಗೋ ಷ್ಠಿಯಲ್ಲಿ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ,  ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಶಿಬಿರದ ಸಂಯೋಜಕ ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News