ಕಾಂಗ್ರೆಸ್ ಶಾಸಕರಿಂದ ಪ್ರತಿಭಟನೆ

Update: 2021-01-28 11:35 GMT

ಬೆಂಗಳೂರು, ಜ.28: ವಿಧಾನಮಂಡಲದ ಉಭಯ ಸದನಗಳನ್ನುದ್ದೇಶಿಸಿ ರಾಜ್ಯಪಾಲ ವಜುಭಾಯಿ ವಾಲಾ ವಿಧಾನಸಭೆಯ ಸಭಾಂಗಣದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ವಿರೋಧ ಪಕ್ಷ ಕಾಂಗ್ರೆಸ್ ಸದಸ್ಯರು ಸರಕಾರದ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಿದರು.

ಬೆಳಗಾವಿಯಲ್ಲಿ ನಡೆಯಬೇಕಾದ ಅಧಿವೇಶನ ಒಂದೂವರೆ ವರ್ಷದಿಂದ ನಡೆದಿಲ್ಲ. ಉತ್ತರ ಕರ್ನಾಟಕ ಭಾಗವಾದ ಹುಬಳ್ಳಿ-ಧಾರವಾಡ, ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಬೀದರ್, ಇವುಗಳಲ್ಲಿ ಭಾರಿಪ್ರವಾಹ ಮತ್ತು ಬರಗಳಿಗೆ ಕರ್ನಾಟಕ ಸರಕಾರ ಯಾವುದೇ ಅನುದಾನ ಪರಿಹಾರ ನೀಡಿಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ‘ಬೆಳಗಾವಿ ನಮ್ಮದು’ ಎಂಬ ಹೇಳಿಕೆ ಖಂಡನೀಯ. ಮಹಾಜನ್ ವರದಿಯೇ ಅಂತಿಮ ಹಾಗೂ ನಂಜುಂಡಪ್ಪ ವರದಿ ಸಂಪೂರ್ಣ ಜಾರಿಗೆ ತರಬೇಕು ಎಂದು ಒತ್ತಾಯಿಸಿ ವಿಧಾನಪರಿಷತ್ತಿನ ಸದಸ್ಯರಾದ ಪ್ರಕಾಶ್ ಕೆ.ರಾಠೋಡ್, ಬಿ.ಕೆ.ಹರಿಪ್ರಸಾದ್, ಮೋಹನ್ ಕೊಂಡಜ್ಜಿ, ಹರೀಶ್ ಕುಮಾರ್, ಯು.ಬಿ.ವೆಂಕಟೇಶ್ ಭಿತ್ತಿಪತ್ರಗಳನ್ನು ಪ್ರದರ್ಶಿಸುವ ಮೂಲಕ ಪ್ರತಿಭಟಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News