ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಹಿಂಸಾಚಾರ: ದೇಶದ್ರೋಹದ ಪ್ರಕರಣ ದಾಖಲಿಸಿದ ದಿಲ್ಲಿ ಪೊಲೀಸರು

Update: 2021-01-28 16:17 GMT

ಹೊಸದಿಲ್ಲಿ, ಜ. 27: ಗಣರಾಜ್ಯೋತ್ಸವದ ದಿನ ನಡೆದ ರೈತರ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿ ದಿಲ್ಲಿ ಪೊಲೀಸರು ದೇಶದ್ರೋಹದ ಪ್ರಕರಣ ದಾಖಲಿಸಿದ್ದಾರೆ.

ದಿಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ ಈ ಘಟನೆಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕೆಂಪು ಕೋಟೆ ಘಟನೆಗೆ ಸಂಬಂಧಿಸಿ ದಿಲ್ಲಿ ಪೊಲೀಸರು ಈ ಹಿಂದೆ ದಾಖಲಿಸಿದ್ದ ಎಫ್‌ಐಆರ್‌ನಲ್ಲಿ ನಟ ದೀಪ್ ಸಿಧು ಹಾಗೂ ಸಾಮಾಜಿಕ ಹೋರಾಟಗಾರನಾಗಿ ಪರಿವರ್ತನೆಯಾದ ಭೂಗತ ಪಾತಕಿ ಲಖಾ ಸಿಧಾನ ಹೆಸರನ್ನು ಉಲ್ಲೇಖಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News